ಚಿತ್ರದುರ್ಗ: ಶಿಕ್ಷಣ ಇಲಾಖೆಯಿಂದ ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಭರತ ನಾಟ್ಯ ಸ್ಪರ್ಧೆಯಲ್ಲಿ ನಗರದ ಎಸ್ಆರ್ಎಸ್ ಹರಿಟೇಜ್ ಶಾಲೆ 9 ನೇ ತರಗತಿ ವಿದ್ಯಾರ್ಥಿನಿ ಕೆ.ಪಿ.ಚಿನ್ಮಯಿ ಪ್ರಥಮ ಸ್ಥಾನ ಗಳಿಲಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕೋಲಾರದಲ್ಲಿ ಫೆಬ್ರವರಿ 5ರಿಂದ ಮೂರು ದಿನಗಳ ಕಾಲ ಸ್ಪರ್ಧೆ ನಡೆಯಲಿದೆ ಎಂದು ಎಸ್ಆರ್ಎಸ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ.