More

    ಬಂಗಾರಪ್ಪ ವಿರುದ್ಧ ಈಶ್ವರಪ್ಪ ಹೇಳಿಕೆಗೆ ಖಂಡನೆ

    ಚಿತ್ರದುರ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಇತ್ತೀಚೆಗೆ ಜರುಗಿದ್ದ ಸಭೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿಗೆ ಕಳಂಕ ತರುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಆರ್.ಶೇಷಣ್ಣಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜಕಾರಣದ ಏಳು-ಬೀಳುಗಳ ನಡುವೆಯೂ ಜನಸಾಮಾನ್ಯರ ಬೇಕು-ಬೇಡಗಳಿಗೆ ಸ್ಪಂದಿಸುವ ಮೂಲಕ ಜನ ನಾಯಕರೆಂದೇ ಬಂಗಾರಪ್ಪ ರಾಜ್ಯದಲ್ಲಿ ಮನೆ ಮಾತಾಗಿದ್ದರು. ಆದರೆ, ಈಶ್ವರಪ್ಪನವರು ಸಭೆಯಲ್ಲಿ ವಿನಾಕಾರಣ ಬಂಗಾರಪ್ಪ ಹೆಸರು ಪ್ರಸ್ತಾಪಿಸುವ ಮೂಲಕ ಅವರ ಅಭಿಮಾನಿಗಳಿಗೆ ಅತೀವ ನೋವಂಟು ಮಾಡಿದ್ದಾರೆಂದು ಶೇಷಣ್ಣಕುಮಾರ್ ಬೇಸರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts