More

    ಬಿಚ್ಚುಗತ್ತಿ ಚಿತ್ರ ವೀಕ್ಷಿಸಿದ ಶರಣರು

    ಚಿತ್ರದುರ್ಗ: ಖ್ಯಾತ ಸಾಹಿತಿ ಬಿ.ಎಲ್.ವೇಣು ಅವರ ಕಾದಂಬರಿ ಆಧರಿತ ಬಿಚ್ಚುಗತ್ತಿ ಸಿನಿಮಾವನ್ನು ಶ್ರೀ ಶಿವಮೂರ್ತಿ ಮುರುಘಾ ಶರಣರು ಬುಧವಾರ ಬೆಳಗ್ಗೆ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ವೀಕ್ಷಿಸಿದರು.

    ಹರಿಹರ ತಾಲೂಕು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಚಳ್ಳಕೆರೆ ಚೆಲುಮೆರುದ್ರಸ್ವಾಮಿ ಮಠದ ಶ್ರೀ ಬಸವಕಿರಣ ಸ್ವಾಮೀಜಿ, ಹಾವೇರಿ ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಇದ್ದರು.

    ಕಾದಂಬರಿಕಾರ ಬಿ.ಎಲ್.ವೇಣು, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಸದಸ್ಯ ವೆಂಕಟೇಶ್ ಮೊದಲಾದವರು ಶ್ರೀಗಳೊಂದಿಗೆ ಸಿನಿಮಾ ವೀಕ್ಷಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts