More

    ಸೇವಾಭದ್ರತೆಗೆ ಒತ್ತಾಯ

    ಚಿತ್ರದುರ್ಗ: ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಜಿಲ್ಲಾ ಘಟಕ ರಾಜ್ಯಸರ್ಕಾರಕ್ಕೆ ಮನವಿ ಮಾಡಿದೆ.

    ಕಿಡ್ನಿ ವೈಫಲ್ಯದಿಂದ ನಗರದ ಜಿಲ್ಲಾಸ್ಪತ್ರೆ ಸರ್ಕಾರಿ ಅತಿಥಿ ಉಪನ್ಯಾಸಕರೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಆರು ವರ್ಷಗಳ ಹಿಂದೆ ತಮ್ಮ ಒಂದು ಕಿಡ್ನಿ ತೆಗೆಸಿದ್ದು, ಕಡು ಬಡತನದಲ್ಲಿರುವ ಅವರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ರಾಜ್ಯದ ಹಲವೆಡೆ ಇನ್ನೂ ಹಲವು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಆದ್ದರಿಂದ ಕೂಡಲೇ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಮಿತಿಯ ಜಿಲ್ಲಾಧ್ಯಕ್ಷ ಪ್ರಕಾಶ್ ರಾಮಾನಾಯ್ಕ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts