ಚಿತ್ರದುರ್ಗ: ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯ ವಾಸವಿ ಎಕ್ಸಲೆನ್ಸ್ ಪ್ರಶಸ್ತಿಗೆ ನಗರದ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಎನ್.ಕಾಶಿವಿಶ್ವನಾಥ ಶೆಟ್ಟಿ ಭಾಜನರಾಗಿದ್ದಾರೆ.
ಮಾ.1ರಂದು ಬೆಂಗಳೂರಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ಎಲ್.ಆರ್.ವೆಂಕಟೇಶ ಕುಮಾರ್ ತಿಳಿಸಿದ್ದಾರೆ.