ಚಿತ್ರದುರ್ಗ: ಹರಿಹರ ತಾಲೂಕು ರಾಜನಹಳ್ಳಿಯಲ್ಲಿ ಫೆ.8ರಿಂದ 2 ದಿನಗಳ ಕಾಲ ನಡೆಯಲಿರುವ ವಾಲ್ಮೀಕಿ ಜಾತ್ರೆ ಕುರಿತಂತೆ ನಗರದ ಮಹಾರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜ.12ರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.
ಶ್ರೀ ಪ್ರಸನ್ನಾನಂದ ವಾಲ್ಮೀಕಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಈ ಸಭೆಯಲ್ಲಿ ಶೇ.7.5 ಮೀಸಲು ಬೇಡಿಕೆ ಕುರಿತಂತೆ ಚರ್ಚೆ ನಡೆಯಲಿದ್ದು, ತಾಲೂಕಿನ ನಾಯಕ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮುಖಂಡ ಬಿ.ಕಾಂತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.