ಚಿತ್ರದುರ್ಗ: ಜೂನ್ನಲ್ಲಿ ನಡೆಯುವ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಜೆಡಿಎಸ್ ಮುಖಂಡ ರಮೇಶ್ಬಾಬು ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದ ಟಿಕೆಟ್ ಕೈ ತಪ್ಪಿದರೆ ಬೇರೆ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು. ಕ್ಷೇತ್ರದಲ್ಲಿ ಒಟ್ಟು 1 ಲಕ್ಷ ಪದವೀಧರ ಮತದಾರರಿದ್ದು, ಹೊಸ ನೋಂದಾಣಿಗೆ ಇನ್ನು ಅವಕಾಶವಿದೆ ಎಂದರು.