ಚಿತ್ರದುರ್ಗ: ಕರೊನಾ ಹಿನ್ನೆಲೆಯಲ್ಲಿ ಮಾ.31ರಿಂದ ಏಪ್ರಿಲ್ 12ರ ವರೆಗೆ ನಗರದಲ್ಲಿ ನಡೆಯಬೇಕಿದ್ದ ಏಕನಾಥೇಶ್ವರಿ ದೇವಿ ಜಾತ್ರಾ ಮಹೋತ್ಸವವನ್ನು ರದ್ದು ಪಡಿಸಲಾಗಿದೆ ಎಂದು ದೇವಾಲಯ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಏ.14 ರಂದು ನಡೆಯಬೇಕಿದ್ದ ಶ್ರೀ ಬರಗೇರಮ್ಮ, ತಿಪ್ಪಿನಘಟ್ಟಮ್ಮ ದೇವರ ಭೇಟಿ ಉತ್ಸವ ರದ್ದಾಗಿದೆ ಎಂದು ಬರಗೇರಮ್ಮ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ತಿಮ್ಮಣ್ಣ, ಕಾರ್ಯದರ್ಶಿ ಚಿನ್ನಪ್ಪ ತಿಳಿಸಿದ್ದಾರೆ.