More

    ಡಿಎಚ್‌ಒ, ಎಸಿ, ತಹಸೀಲ್ದಾರ್ ಸೇರಿ ಹಲವರಿಗೆ ಹೋಂ ಕ್ವಾರಂಟೈನ್

    ಚಿತ್ರದುರ್ಗ: ಗುಜರಾತ್‌ನಿಂದ ಚಿತ್ರದುರ್ಗಕ್ಕೆ ಮರಳಿದ 15 ತಬ್ಲಿಘಿ ಸದಸ್ಯರ ಪೈಕಿ ಮೂವರಲ್ಲಿ ಕರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಜಿಲ್ಲಾ ಆರೋಗ್ಯಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್ ಸೇರಿ ಆರೇಳು ಜನರಿಗೆ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗುತ್ತಿದೆ.

    ತಬ್ಲಿಘಿ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನವನ್ನು ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 5 ರಂದು ತಡೆದು ವಿಚಾರಿಸಿ ಅವರನ್ನು ನೇರವಾಗಿ ಕ್ವಾರಂಟೈನ್ ಮಾಡಲಾಗಿತ್ತು.

    ಆದರೂ ತಬ್ಲಿಘಿ ಸದಸ್ಯರಿಂದ ಮಾಹಿತಿ ಕಲೆ ಹಾಕುವ ವೇಳೆ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರಬಹುದಾದ ಜಿಲ್ಲಾ ಆರೋಗ್ಯಾಧಿ ಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ, ಒಬ್ಬರು ನೌಕರ, ಹಾಸ್ಟೆಲ್ ವಾರ್ಡನ್ ಸೇರಿ ಆರೇಳು ಜನರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.

    ಅಧಿಕಾರಿಗಳು ಸಹಿತ ಒಟ್ಟು 15 ಜನರ ಗಂಟಲು ದ್ರವವಬನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts