ಚಿತ್ರದುರ್ಗ: ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ಸಂತ ಸ್ವಾಮಿ ವಿವೇಕಾನಂದರ ಚಿಂತನೆ ಪಾಲನೆ ಅತ್ಯಗತ್ಯ ಎಂದು ಭಾರತ ಸ್ವಾಭಿಮಾನ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ತಿಳಿಸಿದರು.
ಪತಂಜಲಿ ಯೋಗ ಪೀಠ, ಸಮಿತಿ ಸಂಯುಕ್ತಾಶ್ರಯದಲ್ಲಿ ಕೋಟೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇನ್ಹರ್ ವೀಲ್ ಕ್ಲಬ್ ಅಧ್ಯಕ್ಷೆ ರೀನಾ ವೀರಭದ್ರಪ್ಪ, ಯೋಗ ಸಮಿತಿ ಉಪಾಧ್ಯಕ್ಷ ದೇವಾನಂದ, ಯೋಗ ಪ್ರಚಾರಕ ರವಿ ಕೆ.ಅಂಬೇಕರ್, ಮಹಿಳಾ ಸಮಿತಿ ಪ್ರಧಾನ ಕಾರ್ಯದರ್ಶಿ ಲಲಿತಾ ಬೇದ್ರೆ, ಕವಿತಾ, ಯುವ ಸಮಿತಿ ಅಧ್ಯಕ್ಷ ಜಿ.ನವೀನ್, ಎಲ್.ಎಸ್.ಬಸವರಾಜ್, ಕಿಸಾನ್ ಪಂಚಾಯಿತಿ ಅಧ್ಯಕ್ಷ ರವಿ ಇತರರಿದ್ದರು.