ಕಲಬುರಗಿ: ಜಿಲ್ಲೆಯ ಪ್ರಭಾವಿ ಲಿಂಗಾಯತ ಮುಖಂಡರಾದ ವಿಶ್ವನಾಥ ಪಾಟೀಲ್ ಹೆಬ್ಬಾಳ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಪಕ್ಷದ ರಾಜ್ಯಾದ್ಯಕ್ಷರಿಗೆರಾಜೀನಾಮೆ ಪತ್ರ ಬರೆದು ರವಾನಿದ್ದಾರೆ.
ಅವರ ರಾಜೀನಾಮೆ ನೀಡಿರುವ ಈ ಕುರಿತು ಪ್ರತಿಕ್ರಿಯಿಸಿರುವ ಅವರು ನಮ್ಮವರೊಂದಿಗೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಹೇಳಿದರು.
ಹೆಬ್ಬಾಳ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ನಾಳೆ ಸೇರುವ ನಿರೀಕ್ಷೆ ಇದೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ ಖರ್ಗೆ ಚಿತ್ತಾಪುರ ಅಭಿವೃದ್ಧಿಗೆ ಯಾರು ಸ್ವಾಗತ ಎಂದಿದ್ದಾರೆ. ಹೀಗಾಗಿ ಹೆಬ್ಬಾಳ ಅವರೊಂದಿಗೆ ಮಾತುಕತೆ ನಡೆದಿದ್ದು, ನಾಳೆ ಕೈ ಹಿಡಿಯುವ ಸಾಧ್ಯತೆ ಇದೆ.