More

    ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟ ಪೊಲೀಸ್​ ಕಾನ್ಸ್​ಟೆಬಲ್​

    ಕಲಬುರಗಿ: ಗುಂಡು ಹಾರಿಸಿಕೊಂಡು ಕಾನ್​ಸ್ಟೆಬಲ್​ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

    ಮೃತ ಪೇದೆಯನ್ನು ಮಲ್ಲಿಕಾರ್ಜುನ (34) ಎಂದು ಗುರುತಿಸಲಾಗಿದೆ. ಚಿತ್ತಾಪುರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 303 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಕಾನ್ಸ್​ಟೆಬಲ್ ಪ್ರಾಣ ಬಿಟ್ಟಿದ್ದಾರೆ.

    ಇದನ್ನೂ ಓದಿ: ನಿಮ್ಮ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್​ ಆಗಿದೆಯಾ? ಇಲ್ಲಿದೆ ಪರಿಹಾರ…!

    ಮಲ್ಲಿಕಾರ್ಜುನ್​ ಅವರು ಚುನಾವಣೆ ನಿಮಿತ್ತ ಫ್ಲೈಯಿಂಗ್ ಸ್ವ್ಕಾಡ್​ ಕರ್ತವ್ಯದಲ್ಲಿದ್ದರು. ನಿನ್ನೆ ರಾತ್ರಿ ಚಿತ್ತಾಪುರ ತಹಸೀಲ್ದಾರ್ ಕಚೇರಿಯ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗುಂಡು ಹಾರಿಸಿಕೊಂಡು ಬದುಕು ಅಂತ್ಯಗೊಳಿಸಿದ್ದಾರೆ.

    ಮಲ್ಲಿಕಾರ್ಜುನ್​ ಅವರು ಚಿತ್ತಾಪುರ ತಾಲ್ಲೂಕಿನ ಶಹಬಾದ್ ಮಡ್ಡಿ ನಿವಾಸಿ. ಸಾವಿಗೆ ಕಾರಣ ಏನೆಂದು ತಿಳಿದುಬರಬೇಕಿದೆ. ಘಟನೆ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಬೆಂಗಳೂರಲ್ಲಿ ನಡೆಯಲಿರುವ ಪ್ರಧಾನಿ ಮೋದಿ ರೋಡ್​ ಶೋನಲ್ಲಿ ಕೊಂಚ ಬದಲಾವಣೆ

    ಸ್ಕೂಟಿಯಲ್ಲಿ ಸೀಟ್ ಬೆಲ್ಟ್ ಹಾಕಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಗೆ 1000 ರೂ. ದಂಡ!

    ನಟ ಶರತ್​ಬಾಬು ಕುರಿತು ಏನಿದು ವದಂತಿ?: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕಮಲಹಾಸನ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts