More

    ಸೇನಾ ಹೆಲಿಕಾಪ್ಟರ್​ ದುರಂತ: ಸಾವು-ಬದುಕಿನ ನಡುವೆ ಶೌರ್ಯಚಕ್ರ ಪುರಸ್ಕೃತ, ಕ್ಯಾಪ್ಟನ್​​ ವರುಣ್​​​ ಸಿಂಗ್​​​​ ಹೋರಾಟ

    ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​​​ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ನೀಲಗಿರಿಯ ಕೊನೂರು​​ ಬಳಿ ಪತನಗೊಂಡಿದ್ದು, ಈ ವೇಳೆ ಸೇನಾ ಮುಖ್ಯಸ್ಥ ರಾವತ್​, ಅವರ ಪತ್ನಿ ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡು ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್​​​ ವರುಣ್​​​ ಸಿಂಗ್​​ ಅವರಿಗೆ ವೆಲ್ಲಿಂಗ್ಟನ್​ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಶೌರ್ಯಚಕ್ರ ಪುರಸ್ಕೃತ ಕ್ಯಾಪ್ಟನ್​​ ವರುಣ್​​​ ಸಿಂಗ್​​​​, 2020ರಲ್ಲಿ ತೇಜಸ್​​​ ಯುದ್ಧ ವಿಮಾನ ರಕ್ಷಣೆ ಮಾಡಿದ್ದಕ್ಕಾಗಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ತಮಿಳುನಾಡಿನ ನೀಲಗಿರಿ ಕೊನೂರು​​​ ಸಮೀಪ ಹೆಲಿಕಾಪ್ಟರ್ ಪತನಗೊಂಡಿತ್ತು. ಇದರಲ್ಲಿ ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ರಷ್ಯಾ ನಿರ್ಮಿತ Mi-17V5 ಹೆಲಿಕಾಪ್ಟರ್​​ನಲ್ಲಿ ಪ್ರಯಾಣ ಮಾಡುತ್ತಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts