More

    ಆಂಧ್ರದಲ್ಲಿ ಕ್ರಿಶ್ಚಿಯನ್ನರಿಂದ ಮತಾಂತರ ಹೆಚ್ಚಳ: ಜಗನ್ ಪಕ್ಷದ ಸಂಸದರಿಂದಲೇ ಬಹಿರಂಗ

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮತಾಂತರ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಹಣಬಲದಿಂದ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದರೇ ಆರೋಪಿಸಿದ್ದಾರೆ.

    ಇದನ್ನೂ ಓದಿ: ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!

    ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಮತಾಂತರ ನಡೆಯುತ್ತಿರುವುದು ಸತ್ಯ, ಇದನ್ನು ನಾನೂ ಒಪ್ಪಿಕೊಳ್ಳುತ್ತೇನೆ. ನಮ್ಮ ಸರ್ಕಾರ ಬರುವುದಕ್ಕೆ ಮುಂಚೆಯೂ ಇಲ್ಲಿ ಮತಾಂತರ ನಡೆಯುತ್ತಿತ್ತು. ಈಗಲೂ ಮಿಷನರಿಗಳು ರಾತ್ರಿ ವೇಳೆಯಲ್ಲಿ ಕಾಲೋನಿಗಳಿಗೆ ಹೋಗಿ ಅಲ್ಲಿನ ಜನರಿಗೆ ತಮ್ಮ ಧರ್ಮಬೋಧನೆ ಮಾಡಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎಂದು ಟಿವಿ ಚರ್ಚೆಯಲ್ಲಿ ಸಂಸದ ರಘು ರಾಮಕೃಷ್ಣ ರಾಜು ಅವರು ಹೇಳಿದರು.

    ಕ್ರಿಶ್ಚಿಯನ್ ಧರ್ಮಗುರುಗಳು ವಿದೇಶಗಳಿಂದ ಬರುವ ಅಪಾರ ಹಣದಿಂದ ಜನರನ್ನು ಮತಾಂತರಗೊಳಿಸುತ್ತಿದ್ದಾರೆ. ಆದರೆ ಮತಾಂತರಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

    ಇದನ್ನೂ ಓದಿ: ಇನ್​ಸ್ಟಾಗ್ರಾಂನಲ್ಲಿ ಕೊನೆಯ ಸಂದೇಶ ಬರೆದು ಆತ್ಮಹತ್ಯೆಗೆ ಶರಣಾದ ಬಾಲಿವುಡ್ ಯುವನಟಿ

    ಹಾಗಿದ್ದರೆ ಅಕ್ರಮ ಮತಾಂತರಗಳ ಬಗ್ಗೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆಗೆ, ಇದಕ್ಕೆ ನಮ್ಮ ಸರ್ಕಾರ ಏನು ಮಾಡಬೇಕು? ಬೇರೆ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಮತಾಂತರಗಳು ನಡೆಯುತ್ತಿಲ್ಲವೆ ಎಂದು ಮರು ಪ್ರಶ್ನಿಸಿದರು.

    ಲಾಕ್​ಡೌನ್​ನಿಂದ ಝೆರಾಕ್ಸ್ ಅಂಗಡಿ ತೆರೆಯದಿದ್ರೂ ವಿದ್ಯುತ್​ ಬಿಲ್ ನೋಡಿ ಶಾಕ್​ ಆದ ಮಾಲೀಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts