ಮಾರ್ಟಳ್ಳಿಯಲ್ಲಿ ಕ್ರೈಸ್ತರಿಂದ ಸಂಕ್ರಾಂತಿ ಆಚರಣೆ

blank

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಮಂಗಳವಾರ ಕ್ರೈಸ್ತರು ಸಂಕ್ರಾಂತಿ (ಪೊಂಗಲ್) ಹಬ್ಬವನ್ನು ಆಚರಿಸಿದರು.

ಹಬ್ಬದ ಅಂಗವಾಗಿ ಗ್ರಾಮದ ಚರ್ಚ್‌ನಲ್ಲಿ ಫಾದರ್ ಪ್ರಕಾಶ್ ಅವರಿಂದ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಹಬ್ಬದ ಶುಭಾಶಯ ಕೋರಲಾಯಿತು. ಬಳಿಕ ಗ್ರಾಮದ ಬಸ್ ನಿಲ್ದಾಣದ ಬಳಿ ಮುಖಂಡರು ಹಾಗೂ ಯುವಕರು ಸಿಹಿ ಪೊಂಗಲ್ ತಯಾರಿಸಿ ಸಾರ್ವಜನಿಕರಿಗೆ ವಿತರಿಸಿ ಹಬ್ಬದ ಶುಭಾಶಯ ಕೋರಿದರಲ್ಲದೇ ಕಬ್ಬು ಹಾಗೂ ಎಳ್ಳುಬೆಲ್ಲ ವಿತರಿಸಿ ಸಂತಸ ಹಂಚಿಕೊಂಡರು.

ಈ ವೇಳೆ ಗ್ರಾಮದ ಚರ್ಚ್ ಧರ್ಮಗುರು ಫಾದರ್ ಪ್ರಕಾಶ್ ಮಾತನಾಡಿ, ಪ್ರತಿ ವರ್ಷವೂ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಅನ್ನ ಹಾಗೂ ಧಾನ್ಯಗಳನ್ನು ನೀಡಿದ ದೇವರಿಗೆ ಕೃತಜ್ಞತೆ ಸಲ್ಲಿಸಲು ಸಲುವಾಗಿ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಶುಭವಾಗಲಿ. ಜನರ ಜೀವನದಲ್ಲಿ ನೆಮ್ಮದಿಯನ್ನು ತರಲಿ ಎಂದು ಆಶಿಸಿದರು. ಈ ವೇಳೆ ಗ್ರಾಮಸ್ಥರು ಹಾಜರಿದ್ದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…