More

    ಪುಣ್ಯಕ್ಷೇತ್ರದಲ್ಲಿ ಸಾಹಿತ್ಯ ಸೇವೆ ಶ್ಲಾಘನೀಯ: ಚುಟುಕಿನೈಸಿರಿಯಲ್ಲಿ ಸಾಹಿತಿ ಮುದ್ದು ಮೂಡುಬೆಳ್ಳೆ

    ಮಂಗಳೂರು: ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ 150 ವರ್ಷ ತುಂಬಿದ ಸಂದರ್ಭ ಸಾಹಿತ್ಯ ಕಾರ್ಯಕ್ರಮ ಜೋಡಿಸಲು ಅವಕಾಶ ಸಿಕ್ಕಿರುವುದು ಚುಟುಕು ಸಾಹಿತ್ಯ ಪರಿಷತ್‌ನ ಭಾಗ್ಯ. ಪುಣ್ಯಕ್ಷೇತ್ರದಲ್ಲಿ ಸಾಹಿತ್ಯ ಸೇವೆ ಅಭಿನಂದನೀಯ. ನಿರಂತರ ಚಟುವಟಿಕೆಯ ಪರಿಷತ್ತಿಗೆ ಉಜ್ವಲ ಭವಿಷ್ಯವಿದೆ ಎಂದು ಹಿರಿಯ ಸಾಹಿತಿ ಮುದ್ದು ಮೂಡುಬೆಳ್ಳೆ ಹೇಳಿದರು.

    ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ 150 ಸಂಭ್ರಮ ಪ್ರಯುಕ್ತ ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸೋಮವಾರ ಆಯೋಜಿಸಿದ್ದ ‘ಚುಟುಕಿನೈಸಿರಿ’ ಕವಿ ಸಮ್ಮಿಲನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಹಿರಿಯ ಸಾಹಿತಿ ಇರಾ ನೇಮು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ಜಯಾನಂದ ಅಂಚನ್, ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮೊಕ್ತೇಸರ ಜೆ.ದಿನೇಶ್ ಅಂಚನ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್ ಸುವರ್ಣ, ಯುವ ವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ, ಲೀಲಾಕ್ಷ ಕರ್ಕೇರ, ಉಡುಪಿ ಜಿಲ್ಲಾ ಚುಸಾಪ ಅಧ್ಯಕ್ಷ ಶಿವರಾಮ ಕಾಸರಗೋಡು, ಗಣೇಶ್ ಪ್ರಸಾದ್ ಪಾಂಡೇಲು, ಸತ್ಯಶಾಂತ ಪ್ರತಿಷ್ಠಾನ ಅಧ್ಯಕ್ಷೆ ಶಾಂತಾ ಕುಂಟಿನಿ ಅತಿಥಿಗಳಾಗಿದ್ದರು.

    ‘ಚುಟುಕಿನೈಸಿರಿ’ಯನ್ನು ಕವಿ ರೇಮಂಡ್ ಡಿ’ಕುನ್ಹ ಉದ್ಘಾಟಿಸಿದರು. ಬಂಟ್ವಾಳ ಚುಸಾಪ ಅಧ್ಯಕ್ಷ ಆನಂದ ರೈ ಅಡ್ಕಸ್ಥಳ, ಕವಿ ಡಾ.ಸುರೇಶ್ ನೆಗಳಗುಳಿ ಅತಿಥಿಗಳಾಗಿದ್ದರು. ಕವಿಗೋಷ್ಠಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ, ಯೋಗಗುರು ಡಾ.ಜಗದೀಶ್ ಶೆಟ್ಟಿ, ಚಿತ್ರ ಕಲಾವಿದ ಉಮೇಶ್ ಬೆಳ್ಳೂರು, ಐಆರ್‌ಡಿಒ ಶಿಕ್ಷಣ ಸಂಸ್ಥೆ ನಿರ್ದೇಶಕಿ ಪ್ರಫುಲ್ಲಾ ಗಣೇಶ್ ಅವರನ್ನು ಸನ್ಮಾನಿಸಲಾಯಿತು.

    ರೇಖಾ ಸುದೇಶ್ ರಾವ್ ಪ್ರಾರ್ಥಿಸಿದರು. ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಸ್ವಾಗತಿಸಿದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ವಂದಿಸಿದರು. ಲತೀಶ್ ಸಂಕೊಳಿಗೆ, ವ.ಉಮೇಶ್ ಕಾರಂತ್, ಅರ್ಚನಾ ಎಂ.ಕುಂಪಲ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts