ಸಿಐಡಿಐ ಕೇಂದ್ರದಿಂದ ತಾಂತ್ರಿಕ ಪ್ರಯೋಜನ

blank

ಬೆಳಗಾವಿ: ಇಲ್ಲಿನ ಕೆಎಲ್‌ಎಸ್ ಜಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಡಸಾಲ್ಟ್ ಸಿಸ್ಟಂ ಸಂಸ್ಥೆಯ ಸಹಯೋಗದೊಂದಿಗೆ ಸ್ಥಾಪಿಸಲಾಗಿರುವ ಇಂಟರ್ ಡಿಸಿಪ್ಲಿನರಿ ಡಿಸೈನ್ ಮತ್ತು ಇನ್ನೋವೇಶನ್ (ಸಿಐಡಿಐ) ಕೇಂದ್ರವನ್ನು ಸಿಇಒ ಸುದರ್ಶನ ಮೊಗಸಾಲೆ ಉದ್ಘಾಟಿಸಿದರು.

ಸುದರ್ಶನ ಮೊಗಸಾಲೆ ಮಾತನಾಡಿ, ಸಿಐಡಿಐ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದಲ್ಲಿ ಪ್ರಯೋಜನವಾಗುತ್ತದೆ ಎಂದು ಹೇಳಿದರು. ಧಾರವಾಡದ ಟಾಟಾ ಮೋಟರ್ಸ್ ಪ್ಲಾಂಟ್ ಹೆಡ್ ಪ್ರದೋಶ ಮೊಹಂತಿ ಮಾತನಾಡಿ, ವಿದ್ಯಾರ್ಥಿಗಳು ಸಿಐಡಿಐ ಕೇಂದ್ರದ ಪ್ರಯೋಜನ ಪಡೆದು ಹೆಚ್ಚಿನ ಕೌಶಲ ಹೊಂದಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಲಾ ಸೊಸೈಟಿಯ ಅಧ್ಯಕ್ಷ ಅನಂತ ಮಂಡಗಿ, ಸಿಐಡಿಐ ಕೇಂದ್ರದ ವೈಶಿಷ್ಟೃದ ಬಗ್ಗೆ ವಿವರಿಸಿದರು. ಈ ಕೇಂದ್ರವು ಭವಿಷ್ಯದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಉತ್ತಮ ಕೌಶಲ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೆಎಲ್‌ಎಸ್ ಜಿಐಟಿ ಪ್ರಾಂಶುಪಾಲ ಡಾ.ಎಂ.ಎಸ್.ಪಾಟೀಲ ಅವರು ಸಂಸ್ಥೆಯಲ್ಲಿ ಅನುಷ್ಠಾನಗೊಂಡಿರುವ ವಿವಿಧ ಶೈಕ್ಷಣಿಕ ಯೋಜನೆಗಳ ಕುರಿತು ವಿವರಿಸಿದರು.
ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಹರ್ಷಿತ ಕುಲಕರ್ಣಿ ಮಾತನಾಡಿದರು. ವಿದ್ಯಾರ್ಥಿಗಳು ಕೈಗೊಂಡ ವಿವಿಧ ಪ್ರಾಜೆಕ್ಟ್‌ಗಳ ಪ್ರಾತ್ಯಕ್ಷಿಕೆ ನೀಡಲಾಯಿತು. ಕೆಎಲ್‌ಎಸ್ ಜಿಐಟಿ ಆಡಳಿತ ಮಂಡಳಿ ಅಧ್ಯಕ್ಷ ರಾಜೇಂದ್ರ ಬೆಳಗಾಂವಕರ ಸ್ವಾಗತಿಸಿದರು. ಪ್ರೊ. ಹರೀಶ ಹುಕ್ಕೇರಿ ವಂದಿಸಿದರು.

Share This Article

ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake

Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…

ದೇ ಪದೇ ಗಂಟಲು ನೋವು ಬರುತ್ತಿದೆಯೇ? ಹಾಗಾದ್ರೆ ಈ ಸುಲಭ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ | Home remedies

Home remedies: ಹವಾಮಾನ ಬದಲಾದಂತೆ ಸೋಂಕಿನ ಹರಡುವಿಕೆ ಕೂಡಾ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಅನೇಕ ಜನರು…

ಈರುಳ್ಳಿ ರಸ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ | Onion Juice

Onion Juice: ಈರುಳ್ಳಿ ನಮ್ಮ ದಿನನಿತ್ಯದ ಅಡುಗೆಯಲ್ಲಿ ಬಳಸುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಡುಗೆಯನ್ನು…