More

    ದೇಶ ನಂಬಿರುವುದು ಮೋದಿ ಗ್ಯಾರಂಟಿ

    ಔರಾದ್: ದೇಶದಲ್ಲಿ ಮೋದಿ ಗ್ಯಾರಂಟಿ ನಡೆಯುತ್ತಿದ್ದು, ಜನರು ಅದನ್ನೇ ನಂಬಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ್ತೊಮ್ಮೆ ಜನಸೇವೆಗೆ ಬರಲಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

    ಚಿಂತಾಕಿ ಹಾಗೂ ಎಕಂಬಾ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ದೇಶದ ಪ್ರತಿಯೊಬ್ಬರೂ ಮೋದಿ ಸರ್ಕಾರದ ಯೋಜನೆಯ ಫಲಾನುಭವಿ ಪ್ರತ್ಯಕ್ಷ, ಪರೋಕ್ಷವಾಗಿ ಇದ್ದಾರೆ. ಎಲ್ಲರ ಸ್ವಾಭಿಮಾನ ಮೋದಿ ಸರ್ಕಾರ ಕಾಪಾಡಿದೆ ಎಂದರು.

    ದೇಶದಲ್ಲಿ ೫೦೦ ವರ್ಷದ ನಂತರ ಶ್ರೀರಾಮಮಂದಿರ ನಿರ್ಮಾಣ ಮೋದಿ ಸರ್ಕಾರದಲ್ಲಿ ನೆರವೇರುತ್ತಿದ್ದು, ಕೋಟ್ಯಂತರ ಹಿಂದುಗಳ ಕನಸು ಸಾಕಾರಗೊಳ್ಳುತ್ತಿದೆ. ಕಾಶಿ ವಿಶ್ವನಾಥ, ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಅಭಿವೃದ್ಧಿಯಾಗಿದೆ. ಬೀದರ್‌ನ ಪಾಪನಾಶ ದೇವಸ್ಥಾನವೂ ಅಭಿವೃದ್ಧಿಯಾಗಲಿದೆ ಎಂದರು.

    ಬೀದರ್-ನಾಂದೇಡ ವಾಯಾ ಔರಾದ್ ದೇಗಲೂರ ರೈಲ್ವೆ ಲೈನ್, ರಾಷ್ಟ್ರೀಯ ಹೆದ್ದಾರಿ, ಮುಂಗನಾಳದಿಂದ ಚಿಂತಾಕಿವರೆಗೆ ರಸ್ತೆ ನಿರ್ಮಾಣ, ಜೆಜೆಎಂ ಅಡಿ ಪ್ರತಿ ಮನೆಗೆ ನೀರು, ಪಿಎಂ ಕಿಸಾನ್ ಸೇರಿ ಹಲವು ಯೋಜನೆ ಜನರಿಗೆ ತಲುಪಿಸಲು ಶ್ರಮಿಸಲಾಗಿದೆ ಎಂದರು.

    ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ಗುರುಪಾದಪ್ಪ ನಾಗಮಾರಪಳ್ಳಿ ಅವರ ನಂತರ ಮಾರ್ಗದರ್ಶಕರಾಗಿ, ಆತ್ಮೀಯರಾಗಿರುವ ಭಗವಂತ ಖೂಬಾ ಅವರೊಂದಿಗೆ ನಿಲ್ಲುತ್ತೇವೆ. ನಮ್ಮ ತಾಲೂಕಿನ ಪುತ್ರನನ್ನು ಮೂರನೇ ಬಾರಿ ಗೆಲ್ಲಿಸಿಕೊಂಡು ಬರೋಣ. ದೇಶದ ಅಭಿವೃದ್ಧಿಗೆ ಮೋದಿ ಹಗಲಿರುಳು ಶ್ರಮಿಸುತ್ತಿದ್ದು, ಅವರಿಗೆ ಬೀದರ ಸಂಸದ ಸ್ಥಾನ ಕೊಡುಗೆಯಾಗಿ ನೀಡೋಣ ಎಂದರು.

    ಉಜ್ವಲ್ ಯೋಜನೆಯಡಿ ಹೊಸ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್, ಅಂಚೆ ಇಲಾಖೆ ಖಾತೆ ಪುಸ್ತಕ, ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಡಿ ಪರಿಹಾರದ ಚೆಕ್ ವಿತರಿಸಲಾಯಿತು.

    ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮರೆಡ್ಡಿ, ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಕುಂಬಾರ, ವಿಜಯಕುಮಾರ ಪಾಟೀಲ್ ಗಾದಗಿ, ಅಧಿಕಾರಿಗಳಾದ ಸಂಜೀವಕುಮಾರ ಸುತಾಳೆ, ಶ್ರೀಕಾರ ಬಾಬು, ಮಹೇಶಕುಮಾರ ಗೊರ್ಮೆ, ಅಮರ ಏಡವೆ, ರಾಕೇಶ ಪಾಟೀಲ್, ಜಗದೀಶ ಖೂಬಾ, ಶರಣಪ್ಪ ಪಂಚಾಕ್ಷರಿ, ರಾಜಪ್ಪ ಚಿದ್ರೆ, ಅಣೆಪ್ಪ ಖಾನಾಪುರೆ, ಬಸವರಾಜ ಹೆಬ್ಬಾಳೆ, ಚಂದ್ರಕಾಂತ ಪಾಟೀಲ್ ಕೊಳ್ಳುರ, ಪಿಡಿಓ ಸಂಗೀತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts