More

    ಧಾರ್ಮಿಕ ಸಂಘರ್ಷ ತಪ್ಪಿಸಿದ ಸರ್ಕಲ್​ ಇನ್​ಸ್ಪೆಕ್ಟರ್​: ಪಿಡಿಒಗೂ ತರಾಟೆ, ವೈರಲ್ ಆಗುತ್ತಿದೆ ವಿಡಿಯೋ

    ಬೆಂಗಳೂರು: ರಾಜ್ಯದಲ್ಲಿ ಒಂದು ಸ್ವಲ್ಪ ಧರ್ಮ ಸಂಘರ್ಷ ಉಂಟಾದರೂ ದೊಡ್ಡ ಗಲಭೆ-ದೊಂಬಿಗಳಿಗೆ ಕಾರಣವಾಗುವ ಸಾಧ್ಯತೆ ಅಧಿಕವಾಗಿರುತ್ತದೆ. ಅಂಥದ್ದೊಂದು ಸಂಭಾವ್ಯ ಸಂಘರ್ಷವನ್ನು ದಿಟ್ಟ ಪೊಲೀಸ್ ಅಧಿಕಾರಿಯೊಬ್ಬರು ತಪ್ಪಿಸಿದ್ದು, ಆ ವಿಡಿಯೋ ವೈರಲ್ ಆಗುತ್ತಿದೆ. ಮಾತ್ರವಲ್ಲ, ಪೊಲೀಸ್ ಅಧಿಕಾರಿಯ ನಡೆ ಕುರಿತು ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆ ಸಮೀಪದ ಪುಚ್ಚೆಮೊಗರು ಎಂಬಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಹಿಂದೂಗಳ ಧಾರ್ಮಿಕ ಕಟ್ಟೆಯಲ್ಲಿ ಮುಸ್ಲಿಮರು ಅಕ್ರಮವಾಗಿ ಹಸಿರು ಬಣ್ಣದ ಧ್ವಜ ಹಾಕಿದ್ದರ ಹಿನ್ನೆಲೆಯಲ್ಲಿ ಈ ಎಲ್ಲ ಬೆಳವಣಿಗೆ ನಡೆದಿದೆ. ಧ್ವಜ ತೆರವುಗೊಳಿಸುವ ನಿಟ್ಟಿನಲ್ಲಿ ಮೂಡಬಿದಿರೆ ಸರ್ಕಲ್ ಇನ್​ಸ್ಪೆಕ್ಟರ್​ ಸಂದೇಶ್​ ತಕ್ಷಣ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ.

    ಇದನ್ನೂ ಓದಿ: ಎಲಾನ್​ ಮಸ್ಕ್​ನ ಒಂದು ಸೆಕೆಂಡ್​ನ ಆದಾಯ ಎಷ್ಟು?; ಒಂದು ರಾತ್ರಿಯ ಸಂಪಾದನೆ!

    ಕಟ್ಟೆಯಲ್ಲಿ ಹಸಿರು ಧ್ವಜ ಹಾಕಲು ಪಂಚಾಯಿತಿಯಿಂದ ಅನುಮತಿ ನೀಡಲಾಗಿದೆಯೇ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಪ್ರಶ್ನೆ ಮಾಡಿದಾಗ ಇಲ್ಲ ಎಂದು ಹೇಳಿದ್ದಾರೆ. ಅನುಮತಿ ಇಲ್ಲದಿದ್ದರೂ ಇದನ್ನು ಇಲ್ಲಿ ಹಾಕಲು ಬಿಟ್ಟಿದ್ದೇಕೆ ಎಂದು ಪಿಡಿಒಗೆ ಇನ್​ಸ್ಪೆಕ್ಟರ್ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಆ ಕಟ್ಟೆಯಿಂದ ಅದನ್ನು ತೆರವುಗೊಳಿಸಿದ್ದಾರೆ. ಇನ್​ಸ್ಪೆಕ್ಟರ್​ದು ದಿಟ್ಟ ನಡೆ ಎಂದು ಬಹಳಷ್ಟು ಸಾರ್ವಜನಿಕರು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ವಿಡಿಯೋ ಹಂಚಿಕೊಳ್ಳುತ್ತಿರುವುದರಿಂದ ಅದು ವೈರಲ್ ಆಗಲಾರಂಭಿಸಿದೆ.

    ಇಬ್ಬರು ಮಕ್ಕಳನ್ನು ನೋಡಿಕೊಳ್ಳೋ ಆಯಾಗೆ 80 ಲಕ್ಷ ರೂ. ಸಂಬಳ ಕೊಡ್ತಾರಂತೆ!

    ಹೊಸದೂ ಬೇಡ, ಹಳೇದೂ ಬೇಡ: ಏನಿದು ಮಹಿಳೆಯರ ಒತ್ತಾಯ?; ಮಾನಿನಿಯರು ಒಲಿಯದ ಏಕೈಕ ಭಾಗ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts