More

    ಸಿಎಎ ಪರ ಮೆರವಣಿಗೆಯಲ್ಲಿ ಮಹಾನಗರ ಪಾಲಿಕೆ ವಾಹನ ಬಳಕೆ; ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಿಯಾಂಕ್​ ಖರ್ಗೆ ಟೀಕೆ

    ಕಲಬುರಗಿ: ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ರ‍್ಯಾಲಿಯಲ್ಲಿ ಮಹಾನಗರ ಪಾಲಿಕೆ ವಾಹನವನ್ನು ಬಳಸಿಕೊಂಡಿರುವ ಬಗ್ಗೆ ಶಾಸಕ ಪ್ರಿಯಾಂಕ್​ ಖರ್ಗೆ ಟೀಕಿಸಿದ್ದಾರೆ.

    ಮೆರವಣಿಗೆಯಲ್ಲಿ ಭಾಗಿಯಾದವರು ನೀರು ಬಾಟಲಿಯನ್ನು ರಸ್ತೆ ಬದಿ ಬೀಸಾಡುವ ಬದಲು ವಾಹನದಲ್ಲೇ ಹಾಕಲು ಅನುಕೂಲವಾಗುವಂತೆ ಮಹಾನಗರ ಪಾಲಿಕೆಯ ಕಸ ಸಾಗಿಸುವ ವಾಹನವನ್ನು ಬಳಸಿಕೊಳ್ಳಲಾಗಿತ್ತು. ಆದರೆ ಆ ಫೋಟೋಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ ಖರ್ಗೆ ಕ್ರಮವನ್ನು ಟೀಕಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಹೇಗೆ ಕಲಬುರಗಿ ಮಹಾನಗರ ಪಾಲಿಕೆ ವಾಹನವನ್ನು ಬಳಸಿಕೊಂಡರು? ಇದು ರಾಜ್ಯ ಸರ್ಕಾರ ಪ್ರಾಯೋಜಿತ ರ‍್ಯಾಲಿಯಾ? ಎಂದು ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts