More

    ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ: ನಗರದಲ್ಲಿ ಸಿಐಟಿಯು ಪ್ರತಿಭಟನೆ

    ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಸಿಐಟಿಯು ಜಿಲ್ಲಾ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು.
    ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕಾರ್ಮಿಕ ಕಾಯ್ದೆ ತಿದ್ದುಪಡಿಯ ಆದೇಶದ ಪ್ರತಿಯನ್ನು ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕಾರ್ಮಿಕರ ಕಾಯ್ದೆಯನ್ನು ತಿದ್ದುಪಡಿ ಮಾಡಿ ಅನ್ಯಾಯ ಮಾಡುತ್ತಿದೆ. ಹೊಸ ತಿದ್ದುಪಡಿಯಂತೆ ದಿನದ ಕೆಲಸದ ಅವಧಿ 9 ರಿಂದ 12ಗಂಟೆಗೆ ಏರಿಕೆ ಮಾಡಲಾಗಿದೆ. ವಿರಾಮವಿಲ್ಲದೆ ದುಡಿಮೆಯ ಅವಧಿಯನ್ನು 5ರಿಂದ 6ಗಂಟೆ ಹೆಚ್ಚಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ನೀಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ಆದ್ದರಿಂದ ರಾಜ್ಯ ಸರ್ಕಾರ ತಿದ್ದುಪಡಿ ವಿಧೇಯಕ-2023 ಅನ್ನು ವಾಪಸ್ ಪಡೆಯಬೇಕು. ವಾರಕ್ಕೆ ಐದು ದಿನ ಹಾಗೂ ದಿನಕ್ಕೆ 7 ಗಂಟೆ ಕೆಲಸದ ಅವಧಿ ನಿಗದಿಪಡಿಸಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts