More

    ಪೌರಕಾರ್ಮಿಕರ ಕ್ರೀಡಾಕೂಟಕ್ಕೆ ಚಾಲನೆ

    ಮಾನ್ವಿ: ವರ್ಷವಿಡಿ ಸ್ವಚ್ಛ ತೆಗೆ ಆದ್ಯತೆ ನೀಡುವ ಪೌರ ಕಾರ್ಮಿಕರು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಚಾರ ಎಂದು ಪುರಸಭೆ ಸದಸ್ಯೆ ಲಕ್ಷ್ಮೀ ದೇವಿ ನಾಯಕ ಹೇಳಿದರು.

    ಇದನ್ನೂ ಓದಿ: ಪೌರಕಾರ್ಮಿಕರು ನೈಜ ಭಾರತರತ್ನರು: ಶೋಭಾ ಕರಂದ್ಲಾಜೆ

    ಪಟ್ಟಣದ ಸರ್ಕಾರಿ ಬಾಷುಮಿಯಾ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಪುರಸಭೆ ಪೌರಕಾರ್ಮಿಕರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡಾಕೂಟಗಳಿಂದ ಪೌರಕಾರ್ಮಿಕರು ಮತ್ತು ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸಲು ಕೂಡ ಅನುಕೂಲವಾಗುತ್ತದೆ ಎಂದು ತಿಳಿಸಿದರು.

    ಪುರುಷ ಪೌರಕಾರ್ಮಿಕರಿಗೆ ಗುಂಡು ಎಸೆತ, ಓಟದ ಸ್ಪರ್ಧೆ, ಕಬ್ಬಡ್ಡಿ, ವಾಲಿಬಾಲ್, ಗೋಣಿಚೀಲ ಓಟ, ಕ್ರಿಕೆಟ್, ಮಹಿಳಾ ಪೌರಕಾರ್ಮಿಕರಿಗೆ ಗುಂಡು ಎಸೆತ, ಓಟದ ಸ್ಪರ್ಧೆ, ವಾಲಿಬಾಲ್, ನಿಂಬೆ ಚಮಚ ಓಟ, ಸಂಗೀತ ಕುರ್ಚಿ ಇತರೆ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ಆರೋಗ್ಯ ನಿರೀಕ್ಷಕ ಮಹೇಶ, ಪುರಸಭೆ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts