More

    ಭೂವ್ಯಾಜ್ಯ ಸಂಬಂಧ ಗುಂಪು ಘರ್ಷಣೆ; ಐವರಿಗೆ ಗಾಯ, 5 ಬೈಕ್​ಗಳು ಸುಟ್ಟು ಕರಕಲು

    ರಾಮನಗರ: ಭೂವ್ಯಾಜ್ಯ ಸಂಬಂಧ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದ್ದು, ಐವರು ಗಾಯಗೊಂಡು, ಐದು ಬೈಕ್​ಗಳು ಸುಟ್ಟು ಕರಕಲಾಗಿವೆ. ಇತರ ವಾಹನಗಳೂ ಜಖಂಗೊಂಡಿವೆ.

    ಕಾಂಪೌಂಡ್ ಹಾಕುವ ವಿಚಾರವಾಗಿ ಗ್ರಾಮಸ್ಥರು ಹಾಗೂ ಆರ್ಟ್ ಆಫ್ ಲಿವಿಂಗ್​ ಕಡೆಯವರ ನಡುವೆ ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಬಳಿಕ ರೊಚ್ಚಿಗೆದ್ದ ಗ್ರಾಮಸ್ಥರು ಕಾಂಪೌಂಡ್ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಬೆಂಗಳೂರಲ್ಲಿ ಅಂಬರೀಷ್ ರಸ್ತೆ ಇದೆ, ಮೈಸೂರಲ್ಲೂ ಇದೆ, ಮಂಡ್ಯದಲ್ಲೇಕೆ ಇಲ್ಲ? ನೀವೇ ಪ್ರಶ್ನಿಸಿ: ಸುಮಲತಾ

    ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ‌ ಬಳಿ ಈ ಗಲಾಟೆ ನಡೆದಿದ್ದು, ಪರಿಣಾಮವಾಗಿ ಸೆಕ್ಯುರಿಟಿ ರೂಮ್​ ಗ್ಲಾಸ್​ಗಳು ಪುಡಿಯಾಗಿವೆ. ಮಾತ್ರವಲ್ಲದೆ, ಐವರಿಗೆ ಗಾಯವಾಗಿದ್ದು, 5 ಬೈಕ್​ ಹಾಗೂ 4 ಕಾರುಗಳಿಗೆ ಹಾನಿಯಾಗಿವೆ. ಐದು ಬೈಕ್​ಗಳು ಸುಟ್ಟು ಕರಕಲಾಗಿವೆ.

    ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    36 ಗುಂಟೆ ಜಾಗದಕ್ಕೆ ಆಶ್ರಮದ ಕಡೆಯವರು ಏಕಾಏಕಿ ಕಾಂಪೌಂಡ್ ಹಾಕಲು ತೆರಳಿದ್ದಾಗ ಈ ಗಲಾಟೆ ನಡೆದಿದೆ. ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ಸ್ಥಳಕ್ಕೆ ರಾಮನಗರ ಎಸ್​​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ದೂರು-ಪ್ರತಿದೂರು ದಾಖಲಾಗಿವೆ.

    ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts