blank

ಮೊಬೈಲ್​​ ಸೀಜ್​ ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನಿಗೆ ಇರಿದ Student; ಆಘಾತಕಾರಿ ವಿಡಿಯೋ ವೈರಲ್​

Student Assault

ಲಖನೌ: ತರಗತಿ ವೇಳೆ ಮೊಬೈಲ್ ಬಳಸುತ್ತಿದ್ದದ್ದಾಗ ವಶಪಡಿಸಿಕೊಂಡಿದ್ದಕ್ಕೆ ಕುಪಿತಗೊಂಡ ವಿದ್ಯಾರ್ಥಿಯೋರ್ವ (Student) ಶಿಕ್ಷಕನಿಗೆ (Teacher) ಚಾಕುವಿನಿಂದ ಇರಿದಿರುವ ಘಟನೆ ಉತ್ತರಪ್ರದೇಶದ ಬಹ್ರೈಚ್‌ನ ಮಿಹಿನ್‌ಪುರವದಲ್ಲಿ ನಡೆದಿದೆ.

ನವಯುಗ್ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಗಾಯಾಳುವನ್ನು ರಾಜೇಂದ್ರ ಪ್ರಸಾದ್​ ವರ್ಮಾ (Teacher) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಕೃತ್ಯಕ್ಕೆ ಬಳಸಲಾದ ಚಾಕು ಹಾಗೂ ವಿದ್ಯಾರ್ಥಿಯನ್ನು (Student) ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಎಎಸ್​ಪಿ ರಮಾನಂದ್​ ಪ್ರಸಾದ್​ ಕುಶ್ವಾಹ, ಕಾಲೇಜಿನ ಆವರಣದಲ್ಲಿ ಮೊಬೈಲ್ ತರುವುದು ಹಾಗೂ ಅದರ​ ಬಳಕೆ ನಿಷೇಧಿಸಲಾಗಿದ್ದರು ವಿದ್ಯಾರ್ಥಿಗಳು ಈ ನಿಯಮವನ್ನು ಪಾಲಿಸಿರಲಿಲ್ಲ. ಹೀಗಾಗಿ ಪ್ರಾಧ್ಯಾಪಕ ರಾಜೇಂದ್ರ ಕುಮಾರ್​  (Teacher) ವಿದ್ಯಾರ್ಥಿಗಳ (Students) ಬಳಿ ಇದ್ದ ಮೊಬೈಲ್​ಗಳನ್ನು ವಶಕ್ಕೆ ಪಡೆದು ತಂದೆ-ತಾಯಿಯನ್ನು ಕಾಲೇಜಿಗೆ ಕರೆದುಕೊಂಡು ಬರುವಂತೆ ತಾಕೀತು ಮಾಡಿದ್ದರು.

ಇದರಿಂದ ಕುಪಿತಗೊಂಡ ವಿದ್ಯಾರ್ಥಿಯೋರ್ವ (Student) ಶಿಕ್ಷಕನ ಹತ್ಯೆ ಮಾಡಲು ಸಂಚು ಹಾಕಿದ್ದು, ಅದರಂತೆ ತರಗತಿಯಲ್ಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ಬೇರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗಾಯಾಳುವಿನ ನೆರವಿಗೆ ಧಾವಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿಕ್ಷಕ ರಾಜೇಂದ್ರ ಪ್ರಸಾದ್​ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಗಾಯಾಳುವಿನ ಕುಟುಂಬಸ್ಥರು ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಹಾಗೂ ಕೃತ್ಯಕ್ಕೆ ಬಳಸಲಾದ ಚಾಕುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಎಸ್​ಪಿ ರಮಾನಂದ್​ ಪ್ರಸಾದ್​ ಕುಶ್ವಾಹ ತಿಳಿಸಿದ್ದಾರೆ.

ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ಗೆ ಜಾಮೀನು; ಪತ್ನಿ Vijayalakshmi ಪೋಸ್ಟ್ ವೈರಲ್​

Rohit Sharma ಕ್ರಿಕೆಟ್​ನಲ್ಲಿ ಹೆಚ್ಚು ದಿನ ಆಡುವ ಸಾಧ್ಯತೆಗಳಿಲ್ಲ; ಹಿಟ್​ಮ್ಯಾನ್​ ಕುರಿತು ಶಾಕಿಂಗ್​​ ಹೇಳಿಕೆ ನೀಡಿದ ಮಾಜಿ ಕ್ರಿಕೆಟಿಗ

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…