ಕೊಳ್ಳೇಗಾಲ: ಪಟ್ಟಣದ ಶ್ರೀ ಶಿರಡಿ ಸಾಯಿ ಮಂದಿರ ಮುಖ್ಯರಸ್ತೆಯಲ್ಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಬಡಾವಣೆ ಹೆಸರಿನ ನಾಮಫಲಕದ ಸುತ್ತಮುತ್ತ ಮಂಗಳವಾರ ನಗರಸಭೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸಿದರು.
ಫೆ.3 ರಂದು ನಂ.1 ಕನ್ನಡ ದಿನಪತ್ರಿಕೆ ‘ವಿಜಯವಾಣಿ’ಯಲ್ಲಿ ‘ಖಾಲಿ ನಿವೇಶನಗಳಲ್ಲಿ ಕಸ ಸಂಗ್ರಹ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ನಗರಸಭೆ ಆಯುಕ್ತ ಎ.ರಮೇಶ್, ಆರೋಗ್ಯ ನಿರೀಕ್ಷಕ ಚೇತನ್ ನೇತೃತ್ವದಲ್ಲಿ ಸ್ವಚ್ಛತಾ ಸಿಬ್ಬಂದಿ ಶ್ರೀ ಶಿವಕುಮಾರ್ ಸ್ವಾಮೀಜಿ ಬಡಾವಣೆ ಹೆಸರಿನ ನಾಮಫಲಕ ಸುತ್ತಲೂ ಸ್ವಚ್ಛತೆ ಕೈಗೊಂಡರು. ಸ್ಥಳದಲ್ಲಿ ಬೆಳೆದಿದ್ದ ಗಿಡಗಂಟಿಗಳು, ಸುರಿಯಲಾಗಿದ್ದ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯವನ್ನು ತೆರವು ಮಾಡಿದ್ದಾರೆ.