More

    ಪದ್ಮಶ್ರೀ ಎಂ. ವೆಂಕಟೇಶಕುಮಾರ ರಾಯಭಾರತ್ವ; ಕಿಲ್ಲಾ ಆವರಣದಲ್ಲಿ ಸ್ವಚ್ಛತಾ ಅಭಿಯಾನ

    ಧಾರವಾಡ: ಗಾಂಧಿ ಜಯಂತಿಯ ಮುನ್ನಾ ದಿನವಾದ ಭಾನುವಾರ ಕಿಲ್ಲಾ ಆವರಣದಲ್ಲಿ ನಗರದ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
    ಕೇಂದ್ರ ಸರ್ಕಾರ ಸ್ವಚ್ಛ ಭಾರತ ಮಿಶನ್ ರಾಯಭಾರಿಯನ್ನಾಗಿ ನೇಮಿಸಿದ್ದ ಖ್ಯಾತ ಹಿಂದುಸ್ತಾನಿ ಗಾಯಕ ಹಾಗೂ ಪದ್ಮಶ್ರೀ ಪಂ. ಎಂ. ವೆಂಕಟೇಶಕುಮಾರ ಅವರ ಮಾರ್ಗದರ್ಶನದಲ್ಲಿ 1 ತಾಸು ಶ್ರಮದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ `ಸ್ವಚ್ಛತೆಯೇ ಸೇವೆ’ ಎಂಬ ಧ್ಯೇಯದೊಂದಿಗೆ ಕಿಲ್ಲಾ ಆವರಣದಲ್ಲಿ ಶ್ರಮದಾನ ಮಾಡಲಾಯಿತು.
    ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸದಸ್ಯ ಸುರೇಶ ಬೇದರೆ, ಸಹಾಯಕ ಆಯುಕ್ತ ಫಕ್ಕೀರಪ್ಪ ಇಂಗಳಗಿ ಹಾಗೂ ಪೌರ ಕಾರ್ಮಿಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts