More

    ಅಧಿಕಾರಿಗಳು ಲಂಚ ಕೇಳಿದ್ರೆ ಕೊಡಿ, ನಂತರ ಈ ಕೆಲಸ ಮಾಡಿ ಎಂದ ದೆಹಲಿ ಸಿಎಂ!

    ಪಂಜಾಬ್: ಯಾರಾದ್ರೂ ನಿಮ್ಮ ಹತ್ತಿರ ಲಂಚ ಕೇಳಿದಾಗ ಇಲ್ಲ ಎಂದು ಹೇಳಬೇಡಿ ಎಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಾರ್ವಜನಿಕರಿಗೆ ಒಂದು ಉಪಾಯ ಹೇಳಿದ್ದಾರೆ.

    ಪಂಜಾಬ್​​ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್​ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಕೂಡಾ ಮಾತನಾಡಿದ್ದಾರೆ.

    ಲಂಚ ಕೇಳುವರಿಗೆ ಇಲ್ಲ ಎನ್ನದೆ ಹಣ ನೀಡಿ, ಅವರಿಗೆ ಹಣ ನೀಡಿದ ಸಂಭಾಷಣೆ ಅಥವಾ ಅದರ ರೆಕಾರ್ಡ್ ಮಾಡಿಕೊಳ್ಳಿ. ಬಳಿಕ, ಆಡಿಯೋ/ವಿಡಿಯೋ ವನ್ನು ನೇರವಾಗಿ ಸಿಎಂ ಅವರ ವಾಟ್ಸಾಪ್​ ಸಂಖ್ಯೆಗೆ ರವಾನಿಸಿ ಎಂದಿದ್ದಾರೆ. ಭ್ರಷ್ಟರ ವಿರುದ್ಧ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪಂಜಾಬ್​ ಜನತೆಗೆ ನಾವು ಭರವಸೆ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

    ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗಿನಿಂದಲೂ ಭಗವಂತ್ ಮಾನ್ ಜನಸ್ನೇಹಿ ಹೊಸ ಹೊಸ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಮಾರ್ಚ್​​ 23ರಂದು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​​ ಸಿಂಗ್​ ‘ಶಹೀದ್ ದಿವಸ್’​​ ಅಂಗವಾಗಿ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಪ್ರಾರಂಭಿಸುವುದಾಗಿ ಮಾನ್​ ಘೋಷಣೆ ಮಾಡಿದ್ದಾರೆ.

    ‘2021 ವಿಶ್ವ ಸುಂದರಿ’ ಕಿರೀಟಕ್ಕೆ ಮುತ್ತಿಟ್ಟ ಪೋಲಾಂಡ್​ನ ಕರೊಲಿನಾ ಬಿಲಾವ್​ಸ್ಕಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts