ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಯ ವಿಜಯನಗರದ ಆಂಜನೇಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ. ಆಂಜನೇಯ ದೇವರ ಮುಂದೆ ಕುಳಿತು ಭಕ್ತಿಯಿಂದ ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಬೊಮ್ಮಾಯಿಗೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ ಸೇರಿದಂತೆ ಸ್ಥಳೀಯ ನಿವಾಸಿಗಳು ಸಾಥ್ ನೀಡಿದ್ದಾರೆ.
#WATCH | Karnataka CM Basavaraj Bommai along with his supporters recites Hanuman Chalisa at Hanuman Mandir in Hubbali's Vijay Nagar.
(Source: CMO) pic.twitter.com/ihiJhcD8bL
— ANI (@ANI) May 9, 2023
ಕಾಂಗ್ರೆಸ್ ನಿರ್ಧಾರಕ್ಕೆ ಆಕ್ರೋಶ
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಎಂದು ಹೇಳಿತ್ತು. ಇದು ಬಿಜೆಪಿ ನಾಯಕರ ಹಾಗೂ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣಕ್ಕೆ ಕರೆ ನೀಡಲಾಗಿತ್ತು. ಅದರಂತೆ ಕಳೆದ ಗುರುವಾರ(ಮೇ 04)ದಿಂದ ರಾಜ್ಯದ ವಿವಿಧ ದೇವಾಲಯಗಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಲಾಗಿದೆ.
ಹನುಮಾನ್ ಚಾಲೀಸಾ ಪಠಿಸಿದ ಭಗವಂತ ಖೂಬಾ
ಕಾಂಗ್ರೆಸ್ನಿಂದ ಬಜರಂಗದಳ ನಿಷೇಧ ವಿಚಾರ ಹೆಚ್ಚು ಕಾವು ಪಡೆದುಕೊಂಡಿರುವ ಈ ಸಮಯದಲ್ಲಿ ಬೀದರ್ ಜಿಲ್ಲೆಯ ಐತಿಹಾಸಿಕ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಪೂಜೆ ಸಲ್ಲಿಸಿದ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರಿನ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಶ್ರೀಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ, ಉಪಮೇಯರ್ ಎಸ್.ಹರೀಶ್, ಬಿಜೆಪಿ ಮಹಿಳಾ ಕಾರ್ಯಕರ್ತರು ಶೋಭಾಗೆ ಸಾಥ್ ನೀಡಿದ್ದಾರೆ.