More

    ಯಾವ ಪದನಾಮಗಳೂ ಶಾಶ್ವತವಲ್ಲ, ಬಸವರಾಜ ಬೊಮ್ಮಾಯಿ ಅನ್ನೋದಷ್ಟೇ ಶಾಶ್ವತ!

    ಹಾವೇರಿ: ಮುಖ್ಯಮಂತ್ರಿ ಸ್ಥಾನಕ್ಕೆ ಕೆಲವರು ತೆರೆಮರೆಯಲ್ಲಿ ಪ್ರಯತ್ನಗಳು ನಡೆಸುತ್ತಿರುವುದು ಮತ್ತು ಮುಖ್ಯಮಂತ್ರಿಯ ಬದಲಾವಣೆ ಆಗಲಿದೆ ಎಂದು ಈ ಹಿಂದೆ ಕೆಲವರು ಪ್ರಸ್ತಾಪಿಸಿದ್ದ ಹಿನ್ನೆಲೆಯಲ್ಲಿ ರಾಜ್ಯದ ಜನರು ರಾಜಕೀಯ ಬೆಳವಣಿಗೆಯನ್ನು ಒಂದು ಕುತೂಹಲದಿಂದಲೇ ಗಮನಿಸುತ್ತಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿರುವ ಮಾತುಗಳು ಜನರ ಕೌತುಕವನ್ನು ಹೆಚ್ಚಿಸುವ ರೀತಿಯಲ್ಲಿ ಹೊರಹೊಮ್ಮಿವೆ.

    ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆಯೇ ಇಂಥದ್ದೊಂದು ಕೌತುಕ ಮೂಡಲು ಕಾರಣವಾಗಿದೆ.

    ಇದನ್ನೂ ಓದಿ: ಲೋಕಾಯುಕ್ತ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ದೂರುದಾರ!; ಸೈಟ್​ ಕಬಳಿಕೆ ಬಗ್ಗೆ ದೂರು ಕೊಡಲು ಬಂದಿದ್ದ ಯುವಕ..

    ಇದು ಸಂತರ ನಾಡು, ಇಲ್ಲಿ ವೈಚಾರಿಕ ಕ್ರಾಂತಿಯನ್ನು ಮಾಡಿದ ಗುರುಗಳಿದ್ದಾರೆ. ಕನಕದಾಸರು, ಸಂತ ಶಿಶುನಾಳ‌ ಶರೀಫರು ಇದ್ದ ತಾಲೂಕಿದು ಎಂದು ಹೇಳಿದ ಸಿಎಂ, ಬಳಿಕ ಯಾವುದೂ ಶಾಶ್ವತವಲ್ಲ, ಈ ಬದುಕೇ ಶಾಶ್ವತವಲ್ಲ ಎಂಬುದಾಗಿ ವೈರಾಗ್ಯ ಥರದ ಮಾತುಗಳನ್ನೂ ಆಡಿದ್ದಾರೆ.

    ಇದನ್ನೂ ಓದಿ: ಸೊಸೆ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದ ಮಾವ ಸಾವು; ಸಾವಿಗೆ ಕಾರಣನಾದವ ಪರಾರಿ..

    ನಾವು ಎಷ್ಟು ದಿನ ಇರುತ್ತೇವೆ ಎನ್ನುವುದು ಗೊತ್ತಿಲ್ಲ. ಸ್ಥಾನಮಾನಗಳು ಶಾಶ್ವತವಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ಈ ರಾಜ್ಯದ ಮುಖ್ಯಮಂತ್ರಿಯಾಗಿ‌‌ ನಿಂತಿದ್ದೇನೆ. ಕ್ಷೇತ್ರದ ಹೊರಗಡೆ ಇದ್ದಾಗ ನಾನು ಸಿಎಂ, ಗೃಹ ಸಚಿವ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ಬಸವರಾಜ ಬೊಮ್ಮಾಯಿ ಆಗಿ ಉಳಿಯುತ್ತೇನೆ. ಬಸವರಾಜ ಬೊಮ್ಮಾಯಿ ಅನ್ನೋದು ಶಾಶ್ವತ, ಅದರ ಹಿಂದಿರುವ ಪದನಾಮಗಳು ಶಾಶ್ವತವಲ್ಲ ಎಂಬುದಾಗಿ ಸಿಎಂ ತಮ್ಮ ಮನದಾಳವನ್ನು ತೆರೆದಿಟ್ಟಿದ್ದಾರೆ.

    ಫ್ಲೈಟಲ್ಲಿ ಬಂದು ಕಳವು ಮಾಡಿ ಫ್ಲೈಟಲ್ಲೇ ಮರಳಿದ; 5 ವರ್ಷಗಳ ಹಿಂದೆ ಕದ್ದು ಸಿಕ್ಕಿಬಿದ್ದಿದ್ದ ಆ ದ್ವೇಷವನ್ನು ಮತ್ತೆ ಕದ್ದೇ ತೀರಿಸಿಕೊಂಡ!

    ಮತಾಂತರ ಆಗಿಲ್ಲ ಎಂದಿದ್ದ ತಹಶೀಲ್ದಾರ್​ಗೂ ಶಾಕ್​, ಆಗಿದೆ ಎನ್ನುತ್ತಿರುವ ಶಾಸಕರಿಗೂ ಶಾಕ್​!

    ವಿಶ್ವ ಹಿಂದು ಪರಿಷತ್ ಮುಖಂಡರ ಮೇಲೆ ಬಿಜೆಪಿ ನಾಯಕರಿಂದಲೇ ಹಲ್ಲೆಯತ್ನ; ಮೆರವಣಿಗೆ ವಿಚಾರ ಬಿಗಡಾಯಿಸಿ ಉಂಟಾಯ್ತು ಘರ್ಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts