ಚಿತ್ರದುರ್ಗ: ಹಿರಿಯೂರು ಪಟ್ಟಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿದ್ದು, ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಹಿರಿಯೂರು ತಾಲೂಕು ಕಚೇರಿ ಬಳಿ ಇಂದು(ಮಂಗಳವಾರ) ಈ ದುರ್ಘಟನೆ ಸಂಭವಿಸಿದೆ. ವಾಣಿವಿಲಾಸ ಡ್ಯಾಂ ವೀಕ್ಷಿಸಿ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಮುಖ್ಯಮಂತ್ರಿಗಳು ತೆರಳುತ್ತಿದ್ದರು. ಈ ವೇಳೆ ಬೈಕ್ವೊಂಡು ಅಡ್ಡ ಬಂದಿದ್ದು, ಡಿಕ್ಕಿಯಾಗುವುದನ್ನು ತಪ್ಪಿಸಲು ಎಸ್ಕಾರ್ಟ್ ವಾಹನದ ಚಾಲಕ ಬ್ರೇಕ್ ಹಾಕಿದ್ದು, ನಿಯಂತ್ರಣ ತಪ್ಪಿದ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ಈ ಅವಘಡದಲ್ಲಿ ಸಿಪಿಐ ರಮಾಕಾಂತ್ ಸೇರಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ