More

    ಭ್ರಷ್ಟ ಸಿಎಂ ಎಂದ ಸಿದ್ದರಾಮಯ್ಯಗೆ ಟ್ವೀಟ್​ ಮೂಲಕ ಬಸವರಾಜ ಬೊಮ್ಮಾಯಿ ತಿರುಗೇಟು

    ಬೆಂಗಳೂರು: ಭ್ರಷ್ಟ ಮುಖ್ಯಮಂತ್ರಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

    ದಿಂಬಿನಲ್ಲಿಯೂ ಬಿಡಲಿಲ್ಲ

    ಕರ್ನಾಟಕ ಕಂಡಂತ ಅತ್ಯಂತ ಭ್ರಷ್ಟ ಸರ್ಕಾರ ನಿಮ್ಮದು. 2013 ರಿಂದ 18 ರವರೆಗೆ ಭ್ರಷ್ಟ ಸರ್ಕಾರ ನಡೆಸಿದವರು ನೀವು. ಬಿಡಿಎಯಲ್ಲಿ ರಿಡೂ ಭ್ರಷ್ಟಾಚಾರ, ಸಣ್ಣ ಹಾಗೂ ಬೃಹತ್ ನಿರಾವರಿ, ಎಸ್ಸಿ-ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ ದಿಂಬಿನಲ್ಲಿಯೂ ಬಿಡಲಿಲ್ಲ.

    ಇದನ್ನೂ ಓದಿ: ಏರುಗತಿಯಲ್ಲಿ ಬಿಜೆಪಿ ಮತಗಳಿಕೆ: 2ರಿಂದ 110 ಶಾಸಕರ ತನಕ ಕಮಲ ಪಯಣ; ಕಾಂಗ್ರೆಸ್, ಜನತಾಪಕ್ಷದ್ದೂ ದಾಖಲೆ

    ನೈತಿಕ ಅಧಿಕಾರ ಇಲ್ಲ

    ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರೀಯ ‌ಮಾಡಿದ ಖ್ಯಾತಿ ನಿಮ್ಮದು. ಎಸಿಬಿ ಮಾಡಿ ಎಲ್ಲ ಹಗರಣ ಮುಚ್ಚಿ ಹಾಕುವ ಕೆಲಸ ಮಾಡದ್ದೀರಿ. ಭ್ರಷ್ಟ ಅಧಿಕಾರಿ ಹಾಗೂ ರಾಜಕರಣಿಗಳನ್ನು ರಕ್ಷಣೆ ಮಾಡಿದ್ದೀರಿ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್​ಗೆ ನೈತಿಕ ಅಧಿಕಾರ ಇಲ್ಲ. ನಿಮ್ಮಿಂದ ಸರ್ಟಿಫಿಕೆಟ್ ಪಡೆಯುವ ಅವಶ್ಯಕತೆಯಿಲ್ಲ ಎಂದು ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ.

    ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಂತಹ ಸಮಯದಲ್ಲಿ ನಡೆದಿದೆ ಎನ್ನಲಾದ ಸಾಲು, ಸಾಲು ಭ್ರಷ್ಟಾಚಾರ ಪ್ರಕರಣವನ್ನು ಉಲ್ಲೇಖಿಸಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಭ್ರಷ್ಟ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕವೇ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಹೋಟೆಲ್​ ರೂಮಲ್ಲಿ ಸಿಕ್ಕಿಬಿದ್ದ ನಟಿ ಆರತಿಗೆ ಬಾಲಿವುಡ್ ಲಿಂಕ್​ ಹಿಂದಿರುವ ಕರಾಳತೆ ಬಯಲು

    ಮದುವೆ ಆಗಲು ಇಷ್ಟವಿಲ್ಲ ಆದರೆ ಇದು ಓಕೆ! ಸೌಂದರ್ಯದ ಗಣಿ ಹನಿ ರೋಸ್​ ಅಚ್ಚರಿಯ ಹೇಳಿಕೆ

    ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಇಲಿಯಾನಾ! ಗೋವಾ ಬ್ಯೂಟಿಗೆ ಹರಿದುಬಂತು ಪ್ರಶ್ನೆಗಳ ಸುರಿಮಳೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts