ಬೆಂಗಳೂರು: ಭ್ರಷ್ಟಾಚಾರಕ್ಕೆ ಜನ್ಮ ನೀಡಿದ್ದೇ ಕಾಂಗ್ರೆಸ್ ಪಕ್ಷ. ಉದ್ಯೋಗ ಮಾರಾಟ, ಅಪರಾಧಿಗಳು ಸಿಕ್ಕಾಗ ಬಿಡುವುದು ಆ ಪಕ್ಷದ ಚಾಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ ಆಡಳಿತಾವಧಿಯ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ತನಿಖೆ ನಡೆಯುತ್ತಿದೆ. ಪರೀಕ್ಷೆ ಬರೆಯದವರನ್ನು ಶಿಕ್ಷಕರನ್ನಾಗಿ ನೇಮಿಸಿಕೊಂಡಿದೆ. ಆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಈ ಪ್ರಕರಣದ ಬಗ್ಗೆ ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.
ನೂರು ದೂರು: ಕಾಂಗ್ರೆಸ್ನವರು ಒಂದು ದೂರು ಕೊಟ್ಟಿದ್ದಾರೆ. ನಾವೂ ನೂರು ದೂರು ಕೊಡಬಹುದು. ಅಂತಹ ಕೀಳುಮಟ್ಟದ ರಾಜಕಾರಣ ಮಾಡುವುದಿಲ್ಲ. ಭ್ರಷ್ಟಾಚಾರ, ಅಭಿವೃದ್ಧಿಗೆ ವಿಮುಖವಾಗಿದ್ದರಿಂದಲೇ ಜನರು ಕಳೆದ ಬಾರಿ ಕಾಂಗ್ರೆಸ್ ಅನ್ನು ಸೋಲಿಸಿದರು. ಈ ಬಾರಿಯೂ ಮತ್ತೆ ಸೋಲಿಸುತ್ತಾರೆ ಎಂಬುದು ಗ್ಯಾರಂಟಿಯಾಗಿದೆ. ಇದರಿಂದಾಗಿ ಉಚಿತ ಘೋಷಣೆ, ಮಹಿಳೆಯರಿಗೆ ನೆರವು ಮುಂತಾದ ಕಾರ್ಯಕ್ರಮಗಳ ಭರವಸೆ ಘೋಷಿಸುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಟೀಕಿಸಿದರು.
ಕುಕ್ಕರ್ ತನಿಖೆ: ಕುಣಿಗಲ್ನಲ್ಲಿ ನಾಲ್ಕೈದು ಜನ ಕಾಂಗ್ರೆಸ್ ಶಾಸಕರ ಭಾವಚಿತ್ರವಿರುವ ಕುಕ್ಕರ್ಗಳನ್ನು ಹಂಚಿರುವುದು ಸಾಕ್ಷಿ ಸಮೇತ ಪತ್ತೆಯಾಗಿದೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶ ಪಡಿಸಿಕೊಂಡಿದ್ದಾರೆ. ಇಲಾಖೆ ಈಗಾಗಲೇ ದಂಡ ವಿಧಿಸಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು. ಕಾಂಗ್ರೆಸ್ನವರ ಕಥೆಯಿದು, ತಮ್ಮ ಎಲೆಯಲ್ಲಿ ಕತ್ತೆ ಸತ್ತು ಬಿದ್ದಿದೆ. ಬೇರೆಯವರ ಬಗ್ಗೆ ಅಪಪ್ರಚಾರ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಳಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಅವಘಡ: ಮಾಲ್ಗುಡಿ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯರಿಬ್ಬರ ದುರ್ಮರಣ
ಹಳೇ ಸ್ಕೂಟರ್ನಲ್ಲಿ ದೇಶ ಸುತ್ತಿದ ತಾಯಿ-ಮಗನಿಂದ ಕುಕ್ಕೆಯಲ್ಲಿ ವಿಶೇಷ ಪೂಜೆ