ಪ್ರತಿಪಕ್ಷ ಕಾಂಗ್ರೆಸ್​​ನಲ್ಲಿ 60 ಕ್ಷೇತ್ರಕ್ಕೆ ಅಭ್ಯರ್ಥಿಗಳಿಲ್ಲ: ಸಿಎಂ ಬೊಮ್ಮಾಯಿ ಲೇವಡಿ

ಬೆಂಗಳೂರು: ಪ್ರತಿಪಕ್ಷ ಕಾಂಗ್ರೆಸ್​ನಲ್ಲಿ 60 ಸೀಟ್ ಗಳಿಗೆ‌ ಅಭ್ಯರ್ಥಿಗಳ ಗತಿ ಇಲ್ಲ. ಇದರಿಂದಾಗಿ ಬೇರೆ ಪಕ್ಷದ ಅಸಮಾಧಾನಿತರು ಬರಬಹುದು ಎಂದು ಕಾದು ಕುಳಿತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಲೇವಡಿಯಾಡಿದ್ದಾರೆ. ರೇಸ್ ಕೋರ್ಸ್ ನಿವಾಸದ ಬಳಿ ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಟಿಕೆಟ್ ಸಿಗದ ಕಾರಣಕ್ಕೆ ಬೇಸರ, ಅಸಮಾಧಾನಗೊಂಡವರನ್ನು ಮನವೊಲಿಸಿ ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಆದರೂ ರಾಜಕೀಯ ಮಹತ್ವಾಕಾಂಕ್ಷೆ ಉಳ್ಳವರು ಪಕ್ಷ ತೊರೆಯಲು ಪ್ರಯತ್ನಿಸುತ್ತಿದ್ದಾರೆ. ಲಕ್ಷ್ಮಣ ಸವದಿ‌ ಕಾಂಗ್ರೆಸ್​​ಗೆ ಹೋಗ್ತಿರೋದು ದುಃಖ ತರಿಸಿದೆ ಬಹು ವರ್ಷಗಳ ಒಡನಾಡಿ … Continue reading ಪ್ರತಿಪಕ್ಷ ಕಾಂಗ್ರೆಸ್​​ನಲ್ಲಿ 60 ಕ್ಷೇತ್ರಕ್ಕೆ ಅಭ್ಯರ್ಥಿಗಳಿಲ್ಲ: ಸಿಎಂ ಬೊಮ್ಮಾಯಿ ಲೇವಡಿ