ಬೆಂಗಳೂರು: ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: ಅಪ್ರಾಪ್ತೆಗೆ ಕಿರುಕುಳ ನೀಡಿದ ಪೊಲೀಸ್ ಕಾನ್ ಸ್ಟೇಬಲ್ ಅರೆಸ್ಟ್
‘ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಧನ್ಯವಾದಗಳು. ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮಾಡಿದ ಒಳ್ಳೆ ಕೆಲಸ-ಕಾರ್ಯಗಳನ್ನು ನಾನು ಸಹ ಖಂಡಿತವಾಗಿ ಮುಂದುವರೆಸುತ್ತೇನೆ.
Thank you Prime Minister @narendramodi ji for your kind wishes. I will definitely continue the good work done by state govt under able leadership of @BSYBJP. We, as team will work for the development of the state and the nation under guidelines of all our senior leaders https://t.co/WL6svbRTMX
— Basavaraj S Bommai (@BSBommai) July 28, 2021
ಪಕ್ಷದ ಹಿರಿಯ ನಾಯಕರ ಮಾರ್ಗಸೂಚಿಯಲ್ಲಿ, ರಾಜ್ಯ ಮತ್ತು ದೇಶವನ್ನು ಅಭಿವೃದ್ಧಿಯೆಡೆಗೆ ಸಾಗಿಸಲು ನಾನು ಮತ್ತು ನಮ್ಮ ತಂಡ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.