More

    ಮತ್ತೆ ದೆಹಲಿ ಕಡೆಗೆ ಸಿಎಂ ಬಸವರಾಜ ಬೊಮ್ಮಾಯಿ!

    ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೆ ರಾಜಧಾನಿ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ(ಸೆ.7) ಬೆಳಗ್ಗೆ 11-30 ಕ್ಕೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಸಿಎಂ, ಎರಡು ದಿನಗಳ ದೆಹಲಿ ಪ್ರವಾಸ ನಡೆಸಲಿದ್ದಾರೆ.

    ಮಂಗಳವಾರ ಸಂಜೆ ದೆಹಲಿಯಲ್ಲಿ ಆಯೋಜಿಸಲ್ಪಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ಬುಧವಾರ, 8ನೇ ತಾರೀಖಿನಂದು ಕೇಂದ್ರ ಸಚಿವರನ್ನು ಮತ್ತು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದು, ಬಳಿಕ ರಾತ್ರಿ ಬೆಂಗಳೂರಿಗೆ ಮರುಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ರೋಹಿಣಿ ಸಿಂಧೂರಿ ಆಸ್ತಿಯ ಮೂಲವನ್ನ ಕೆದಕಿದ ಸಾರಾ ಮಹೇಶ್!

    ಕಳೆದ ಬಾರಿ ದೆಹಲಿ ಪ್ರವಾಸದ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಭೇಟಿ ಮಾಡಲು ಆಗಿರಲಿಲ್ಲ. ಈ ಬಾರಿ ಅವರನ್ನೂ ಭೇಟಿ ಮಾಡಿ, ಉಳಿದ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಹಾಗೂ ನಿಯಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ಬೆಳಗಾವಿಯಲ್ಲಿ ಕಾಂಗ್ರೆಸ್​​ಗೆ​ ಜನ ಉತ್ತರ ಕೊಟ್ಟಿದ್ದಾರೆ: ಸಿಎಂ ಬೊಮ್ಮಾಯಿ

    ಗಿನ್ನೆಸ್​ ವರ್ಲ್ಡ್​ ರೆಕಾರ್ಡ್ಸ್​​ನ 2022 ಹಾಲ್​ ಆಫ್​ ಫೇಮ್​ ಸೇರಿದ BTS

     

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts