ಬೆಂಗಳೂರು: ಗುರುವಾರ ಹತ್ತು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಡಾಲರ್ಸ್ ಕಾಲನಿ ನಿವಾಸದಲ್ಲಿ ಬುಧವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿಯಿಂದ ಹೈಕಮಾಂಡ್ ನಾಯಕರು 10 ಜನಕ್ಕೆ ಮಾತ್ರ ಹೇಳಿದ್ದಾರೆ. ಮುಂದಿನದ್ದನ್ನು ದೆಹಲಿಗೆ ಬಂದು ಮಾತನಾಡಲು ಸೂಚಿಸಿದ್ದಾರೆ, ಹೀಗಾಗಿ ನಾಳೆ ಹತ್ತು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿಎಸ್ವೈ ಹೇಳಿದರು.
ಉಮೇಶ್ ಕತ್ತಿ ಅವರನ್ನು ನೂರಕ್ಕೆ ನೂರು ಸಚಿವರನ್ನಾಗಿ ಮಾಡುತ್ತೇವೆ ಎಂದು ಕತ್ತಿಗೆ ಭರವಸೆ ನೀಡಿದ ಬಿಎಸ್ವೈ ಮಹೇಶ್ ಕುಮಟಳ್ಳಿ ಅವರನ್ನು ಸಚಿವರನ್ನಾಗಿ ಮಾಡೋದು ಕಷ್ಟ ಎಂದರು. ಅವರನ್ನು ಕರೆದು ಮಾತನಾಡುತ್ತೇವೆ. ಪಕ್ಷದಲ್ಲಿ ಬೇರೆ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್)