More

    ನಾಳೆ 10 ಶಾಸಕರು ಸಚಿವರಾಗಿ ಪ್ರಮಾಣ ವಚನ: ಕುಮಟಳ್ಳಿಯನ್ನು ಸಚಿವರನ್ನಾಗಿ ಮಾಡೋದು ಕಷ್ಟವೆಂದ ಸಿಎಂ ಬಿಎಸ್​ವೈ

    ಬೆಂಗಳೂರು: ಗುರುವಾರ ಹತ್ತು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ತಿಳಿಸಿದರು.

    ಡಾಲರ್ಸ್​ ಕಾಲನಿ ನಿವಾಸದಲ್ಲಿ ಬುಧವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿಯಿಂದ ಹೈಕಮಾಂಡ್ ನಾಯಕರು 10 ಜನಕ್ಕೆ ಮಾತ್ರ ಹೇಳಿದ್ದಾರೆ. ಮುಂದಿನದ್ದನ್ನು ದೆಹಲಿಗೆ ಬಂದು ಮಾತನಾಡಲು ಸೂಚಿಸಿದ್ದಾರೆ, ಹೀಗಾಗಿ ನಾಳೆ ಹತ್ತು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿಎಸ್​ವೈ ಹೇಳಿದರು.

    ಉಮೇಶ್ ಕತ್ತಿ ಅವರನ್ನು ನೂರಕ್ಕೆ ನೂರು ಸಚಿವರನ್ನಾಗಿ ಮಾಡುತ್ತೇವೆ ಎಂದು ಕತ್ತಿಗೆ ಭರವಸೆ ನೀಡಿದ ಬಿಎಸ್​ವೈ ಮಹೇಶ್ ಕುಮಟಳ್ಳಿ ಅವರನ್ನು ಸಚಿವರನ್ನಾಗಿ ಮಾಡೋದು ಕಷ್ಟ ಎಂದರು. ಅವರನ್ನು ಕರೆದು ಮಾತನಾಡುತ್ತೇವೆ. ಪಕ್ಷದಲ್ಲಿ ಬೇರೆ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts