More

    ಮನೆಯಲ್ಲಿ ಗಣಪತಿಗೆ ಪೂಜೆ ಸಲ್ಲಿಸಿದ ಬಿಎಸ್​​ವೈ: ಹಬ್ಬದಂದು ಸಿಎಂ ಮನೆಗೆ ಬಂದ್ರು ಬಿ.ಎಲ್.ಸಂತೋಷ್​

    ರಾಜ್ಯದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಕುಟುಂಬದವರೊಂದಿಗೆ ಗಣಪತಿಗೆ ಪೂಜೆ ಸಲ್ಲಿಸಿದ್ದಾರೆ. ಹಾಗೇ ನಾಡಿನ ಜನತೆಗೂ ಗಣೇಶ ಚತುರ್ಥಿಯ ಶುಭ ಕೋರಿದ್ದಾರೆ. ಎಲ್ಲರಿಗೂ ಗಣಪತಿ ಅನುಗ್ರಹ ಸದಾ ಇರಲಿ ಎಂದು ಹಾರೈಸಿದ್ದಾರೆ.

    ಇತ್ತೀಚೆಗಷ್ಟೇ ಕರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಮೊದಲಿನಷ್ಟೇ ಲವಲವಿಕೆಯಿಂದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದೂ ಕೂಡ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಅವರನ್ನು ಮನೆಗೆ ಆಹ್ವಾನಿಸಿ, ರಾಜ್ಯದ ಅಭಿವೃದ್ಧಿ, ಪಕ್ಷ ಸಂಘಟನೆ ಕುರಿತು ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್​ ಕುಮಾರ್ ಕೂಡ ಇದ್ದರು.

    ಬಿ.ಎಸ್​.ಯಡಿಯೂರಪ್ಪನವರು ಈ ಬಗ್ಗೆ ಟ್ವೀಟ್​ ಮಾಡಿ, ಫೋಟೋವನ್ನೂ ಶೇರ್​ ಮಾಡಿಕೊಂಡಿದ್ದಾರೆ. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts