VIDEO: ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ, ಇಂದೇ ಮಾತುಕತೆಗೆ ಬನ್ನಿ: ಮುಖ್ಯಮಂತ್ರಿ ಬಿಎಸ್​ವೈ ಆಹ್ವಾನ

blank
blank

ಬೆಂಗಳೂರು: ಬಂದ್ ಎಲ್ಲ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ, ಇಂದೇ ಮಾತುಕತೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಪ್ರತಿಭಟನಾಕಾರರಿಗೆ ಆಹ್ವಾನ ನೀಡಿದ್ದಾರೆ.

ಸರೋಜಿನಿ ಮಹಿಷಿ ವರದಿಯ ಅಂಶಗಳ ಅನುಷ್ಠಾನಕ್ಕೆ ಆಗ್ರಹಿಸಿ ಕೆಲವು ಕನ್ನಡಪರ ಸಂಘಟನೆಗಳು ಗುರುವಾರ ಕರ್ನಾಟಕ ಬಂದ್​ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್​ವೈ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ನಾನೂ ಕನ್ನಡ ಪರ ಒಲವು ಇರುವಂಥವನೇ. ಕನ್ನಡಿಗರಿಗೆ ಉದ್ಯೋಗ ದೊರಕಬೇಕು ಎಂಬ ಆಶಯ ನನ್ನದು ಕೂಡ. ಈಗಾಗಲೇ ಮಹಿಷಿ ವರದಿಗೆ ಸಂಬಂಧಿಸಿದ ಹಲವು ಅಂಶಗಳನ್ನು ಜಾರಿಗೊಳಿಸಿದ್ದೇವೆ. ಇನ್ನೇನು ಆಗಬೇಕು ನೋಡೋಣ. ಬಂದ್ ಎಲ್ಲ ಮಾಡಿ ಸಾರ್ವಜನಿಕರಿಗೆ ವಿನಾಕಾರಣ ತೊಂದರೆ ಕೊಡಬೇಡಿ. ಬಂದ್​ ಕರೆ ನೀಡಿದವರು ಇಂದೇ ನನ್ನನ್ನು ಭೇಟಿ ಮಾಡಿ. ಮಾತುಕತೆಗೆ ಸದಾ ಸಿದ್ಧನಿದ್ದೇನೆ. ಇವತ್ತೇ ಬೇಕಾದರೆ ನನ್ನ ಮನೆಗೆ ಬರಲಿ. ಯಾವ್ಯಾವ ಸಮಸ್ಯೆಗಳಿವೆ ಎಲ್ಲವನ್ನು ಮಾತುಕತೆ ಮೂಲಕ ಬಗೆಹರಿಸೋಣ. ನಾಳೆಯ ಎಲ್ಲ ಕಾರ್ಯಕ್ರಮವನ್ನೂ ರದ್ದುಮಾಡಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕಾಂಗ್ರೆಸ್ ಬೆಂಬಲದ ವಿಚಾರ ಪ್ರಶ್ನಿಸಿದಾಗ, ಈ ವಿಷಯದಲ್ಲಿ ರಾಜಕಾರಣ ಬೇಡ. ಪಕ್ಷ ಬೇಧ ಮರೆತು ವ್ಯಾವಹಾರಿಕವಾಗಿ ಏನು ಮಾಡಬಹುದು ನೋಡೋಣ. ಅವರೂ ಅಧಿಕಾರದಲ್ಲಿ ಇದ್ದರಲ್ಲವೆ? ಏನು ಮಾಡಿದರು? ಎಂದು ಸಿಎಂ ಬಿಎಸ್​ವೈ ಪ್ರಶ್ನಿಸಿದರು.

Share This Article

ಪೈಲ್ಸ್​ ಇರುವವರು ಈ ಆಹಾರಗಳನ್ನು ಬಿಟ್ಟುಬಿಡಿ! ಸಮಸ್ಯೆಯಿಂದ ಹೊರಬರಲು ಇಲ್ಲಿವೆ ಉಪಯುಕ್ತ ಸಲಹೆ | Piles

Piles: ಮೂಲವ್ಯಾಧಿ ಅಥವಾ ಪೈಲ್ಸ್​ ಸಮಸ್ಯೆ ಬಹುಜನರಲ್ಲಿ ಕಾಡುವ ತೀರ ಸಾಮಾನ್ಯ ರೋಗ. ಅದರಲ್ಲೂ ಇಂದಿನ…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ! ಯಾವ ಆರೋಗ್ಯ ಸಮಸ್ಯೆನೂ ಬರಲ್ಲ.. curry leaves water

ಬೆಂಗಳೂರು: ( curry leaves water )  ನೀವು ಕೂಡ ನಿಮ್ಮ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು…