ಬೆಂಗಳೂರು: ಈಗಾಗಲೇ ಒಮ್ಮೆ ಮುಂದುವರಿಸಲಾಗಿರುವ ಲಾಕ್ಡೌನ್ ಮತ್ತೆ ಮುಂದುವರಿಯಲಿದೆಯೇ ಎಂಬ ಕುರಿತ ಕುತೂಹಲ ರಾಜ್ಯದ ಜನತೆಯಲ್ಲಿದ್ದು, ಆ ಸಂಬಂಧ ಸರ್ಕಾರ ಇದೀಗ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಮಾತ್ರವಲ್ಲ ಲಾಕ್ಡೌನ್ ಮುಂದುವರಿಕೆ ಜನರ ಸಹಕಾರವನ್ನು ಅವಲಂಬಿಸಿಯೇ ನಿರ್ಧಾರವಾಗಲಿದೆ ಎನ್ನುವ ಮೂಲಕ ಅಡ್ಡಗೋಡೆ ಮೇಲೆ ದೀಪವಿಟ್ಟಿದೆ.
ರಾಜ್ಯದ ಕರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ನಡೆಸಿದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆ ಬಗ್ಗೆ ತಮ್ಮ ನಿಲುವನ್ನ ತಿಳಿಸಿದ್ದಾರೆ. ಈಗಾಗಲೇ ವಿಸ್ತರಿಸಲಾಗಿರುವ ಲಾಕ್ಡೌನ್ ಜೂ. 7ರ ವರೆಗೂ ಇರಲಿದೆ. ಆ ಬಳಿಕ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ನಿರ್ಧರಿಸಲು ಸಾಕಷ್ಟು ಸಮಯಾವಕಾಶವಿದೆ. ಹೀಗಾಗಿ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎರಡನೇ ಸಲ ಲಾಕ್ಡೌನ್ ವಿಸ್ತರಿಸಲಾಗಿದ್ದು, ಜನರು ಉತ್ತಮ ಸಹಕಾರ ಕೊಡುತ್ತಿದ್ದಾರೆ. ಅವರ ಸಹಕಾರ ಉತ್ತಮವಾಗಿದ್ದರೆ ಲಾಕ್ಡೌನ್ ಮತ್ತೆ ಮುಂದುವರಿಸುವ ಅಗತ್ಯ ಬೀಳುವುದಿಲ್ಲ ಎನ್ನುವ ಮೂಲಕ ಸಿಎಂ ಜನರ ಜವಾಬ್ದಾರಿ ಕುರಿತು ಪರೋಕ್ಷವಾಗಿ ಸೂಚನೆ ನೀಡಿದ್ದಾರೆ.
ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥನಾರಾಯಣ ಅವರು ಕೂಡ ಈ ಬಗ್ಗೆ ಮಾತನಾಡಿದ್ದು, ಈಗಲೇ ಏನನ್ನೂ ಹೇಳುವುದು ಸಾಧ್ಯವಿಲ್ಲ. ಲಾಕ್ಡೌನ್ ಬಳಿಕ ಪ್ರಕರಣಗಳು ತಗ್ಗಿವೆ. ಆದರೆ ಈಗಾಗಲೇ ವಿಧಿಸಲಾಗಿರುವ ಲಾಕ್ಡೌನ್ ಮುಗಿಯಲು ಎರಡು ಮೂರು ದಿನಗಳಿರುವಾಗ ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಕರೊನಾ ಸೋಂಕನ್ನು ಗೆದ್ದ ಶತಾಯುಷಿ ದಂಪತಿ; ಹೂವಿನ ಹಾರ ಹಾಕಿ ಸ್ವಾಗತಿಸಿದ ಗ್ರಾಮಸ್ಥರು
ಕೋವಿಡ್ನಿಂದ ಅನಾಥರಾದ ಮಕ್ಕಳಿಗೆ ಸಿಗಲಿದೆ 10 ಲಕ್ಷ ರೂಪಾಯಿ!; ಅಪ್ಪ-ಅಮ್ಮನಿಲ್ಲದ ಮಕ್ಕಳಿಗಾಗಿ ಪಿಎಂ ಕೇರ್ಸ್