ಖಾತೆ ಕಿತ್ತುಕೊಂಡ ಬೆನ್ನಲ್ಲೇ ಖಾಸಗಿ ಕಾರನ್ನೇರಿ ಶ್ರೀರಾಮುಲು ಹೊರಟದ್ದೆಲ್ಲಿಗೆ?

ಬೆಂಗಳೂರು: ತನ್ನ ಬಳಿಯಿದ್ದ ಆರೋಗ್ಯ ಖಾತೆಯನ್ನು ಹಿಂಪಡೆದಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ಶ್ರೀರಾಮುಲು ನಡೆ ಕುತೂಹಲ ಮೂಡಿಸಿದೆ. ಖಾತೆ ಬದಲಾವಣೆಯ ಪಟ್ಟಿಗೆ ರಾಜ್ಯಪಾಲರಿಂದ ಅಧಿಕೃತ ಅಂಕಿತ ಬಿದ್ದ ಕಲವೇ ಕ್ಷಣದಲ್ಲಿ ಯಡಿಯೂರಪ್ಪರನ್ನು ಭೇಟಿ ಮಾಡಲು ಸಿಎಂ ನಿವಾಸ ಕಾವೇರಿಗೆ ಶ್ರೀರಾಮುಲು ಆಗಮಿಸಿದರು. ಅದೂ ಸರ್ಕಾರಿ ವಾಹನ ಬಿಟ್ಟು ಫಾರ್ಚೂನರ್ ಕಾರಿನಲ್ಲಿ! ಆರೋಗ್ಯ ಖಾತೆ ಕಿತ್ತುಕೊಂಡ ಬೆನ್ನಲ್ಲೇ ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ಸಿಎಂ ನಿವಾಸಕ್ಕೆ ಶ್ರೀರಾಮುಲು ಬಂದದ್ದು ಕುತೂಹಲ ಮೂಡಿಸಿದೆ. ಸಚಿವ ಸಂಪುಟ ಪುನರ್​ ವಿಸ್ತರಣೆಗೂ ಮುನ್ನವೇ … Continue reading ಖಾತೆ ಕಿತ್ತುಕೊಂಡ ಬೆನ್ನಲ್ಲೇ ಖಾಸಗಿ ಕಾರನ್ನೇರಿ ಶ್ರೀರಾಮುಲು ಹೊರಟದ್ದೆಲ್ಲಿಗೆ?