ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿ ಸಫಲವಾಗಿದ್ದು, ಬುಧವಾರ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ಅನುಮತಿ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಹಲವು ದಿನಗಳಿಂದ ಸಚಿವರಾಗಲು ಕಾಯುತ್ತಿದ್ದವರಿಗೆ ಶುಕ್ರದೆಸೆ ಬಂದೊದಗಿದೆ.
ವರಿಷ್ಠರ ಭೇಟಿ ನಂತರ ಬೆಂಗಳೂರಿಗೆ ವಾಪಾಸಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, 7 ಜನರು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಯಾರೆಲ್ಲ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಪಟ್ಟಿ ನೀಡುತ್ತೇನೆ ಎಂದೂ ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ವಿವರಗಳಿಗೆ https://t.co/YaFZZbZDD9 ನೋಡಿ pic.twitter.com/J8F6npHNYk— Vijayavani (@VVani4U) January 10, 2021
ಮಧ್ಯರಾತ್ರಿಯಲ್ಲಿ ನೀರು ಕುಡಿಯಲೆದ್ದಿದ್ದ ಅಮ್ಮನಿಗಾಯ್ತು ದಿಗಿಲು; ರಾತ್ರಿ ಮಲಗಿದ್ದ ಮಗ-ಸೊಸೆ ಅಲ್ಲಿರಲಿಲ್ಲ..!
ನೆನಪಿರಲಿ, ಹುಡುಗರೂ ಸೇಫ್ ಅಲ್ಲ… ಕೆಲಸದ ಆಮಿಷ ಒಡ್ಡಿ ಯುವಕನ ಮೇಲೆ ಗ್ಯಾಂಗ್ರೇಪ್!