ಬೆಂಗಳೂರು: ಕೇರಳದ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕುಗಳ ಕೆಲವು ಊರುಗಳ ಕನ್ನಡ ಹೆಸರುಗಳನ್ನು ಬದಲಿಸುವ ಕೇರಳ ಸರ್ಕಾರದ ಪ್ರಯತ್ನ ಕೆಲವು ದಿನಗಳಿಂದ ಚರ್ಚಾಸ್ಪದವಾಗಿದ್ದು, ಕರ್ನಾಟಕದಲ್ಲಿ ಆ ಬಗ್ಗೆ ವಿರೋಧದ ದನಿ ಕೂಡ ಕೇಳಿಬಂದಿದೆ.
ಆ ನಿಟ್ಟಿನಲ್ಲಿ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಪ್ರವೇಶ ಮಾಡಿದ್ದು, ಊರುಗಳ ಕನ್ನಡ ಹೆಸರುಗಳ ಬದಲಾವಣೆ ಆಗದಂತೆ ತಡೆಯಲು ಮುಂದಾಗಿದ್ದಾರೆ. ಕನ್ನಡದ ಹೆಸರುಗಳ ಬದಲಾವಣೆ ಪ್ರಯತ್ನಕ್ಕೆ ಕರ್ನಾಟಕ-ಕೇರಳ ಗಡಿಭಾಗದ ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕಾಸರಗೋಡು ಮತ್ತು ಮಂಜೇಶ್ವರ ತಾಲ್ಲೂಕುಗಳ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾಯಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರದ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ.
ಕೇರಳದ ಕಾಸರಗೋಡು ಮತ್ತು ಮಂಜೇಶ್ವರ ತಾಲ್ಲೂಕುಗಳ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾಯಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರಿ ಮುಖ್ಯಮಂತ್ರಿ @BSYBJP ರವರು ಕೇರಳದ ಮುಖ್ಯಮಂತ್ರಿ @vijayanpinarayi ಅವರಿಗೆ ಪತ್ರ ಬರೆದಿದ್ದಾರೆ. @CMOKerala pic.twitter.com/qOg9p7Mwco
— CM of Karnataka (@CMofKarnataka) June 28, 2021
ಹ್ಯಾಕ್ ಮಾಡಿದ್ದಕ್ಕೂ ಈಕೆಗೆ ಲಕ್ಷಗಟ್ಟಲೆ ರೂಪಾಯಿ ಇನಾಮು ಸಿಕ್ತು; ಮೈಕ್ರೋಸಾಫ್ಟ್, ಫೇಸ್ಬುಕ್ನಿಂದ್ಲೇ ಬಹುಮಾನ
43 ಸಲ ಪಾಸಿಟಿವ್, 7 ಬಾರಿ ಆಸ್ಪತ್ರೆಗೆ ದಾಖಲು; ಈತ ಜಗತ್ತಲ್ಲೇ ಅತಿ ಹೆಚ್ಚು ದಿನ ಕೋವಿಡ್ನಿಂದ ಬಳಲಿದ ವ್ಯಕ್ತಿ!
ಆ ಭಾಗ ಸ್ವಲ್ಪ ಕಾಣಿಸ್ತಿದೆ ಅಂತ ಜಿಮ್ನಿಂದ್ಲೇ ಹೊರಗೆ ಕಳಿಸಿದ್ರಂತೆ!; ಅವಮಾನ ಆಯಿತೆಂದು ವಿಡಿಯೋ ಮಾಡಿ ಅತ್ತಳು…
ಸೀಟ್ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ