ಶಿವಮೊಗ್ಗ: ಕರೊನಾ ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶೀಘ್ರ ಗುಣಮುಖವಾಗಲೆಂದು ಪ್ರಾರ್ಥಿಸಿ ಬಿಜೆಪಿ ಕಾರ್ಯಕರ್ತರು ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಗರ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಪಾಲಿಕೆ ಸದಸ್ಯರಾದ ಪ್ರಭಾಕರ್, ಸುರೇಖಾ ಮುರಳೀಧರ್, ಕಲ್ಪನಾ ರಮೇಶ್, ಅನಿತಾ ರವಿಶಂಕರ್, ಶಿವಾಜಿ ರಾವ್, ಮೋಹನ್, ಹಿಂದುಳಿದ ಆಯೋಗದ ಸದಸ್ಯ ಸಿ.ಎಚ್.ಮಾಲತೇಶ್, ಕೆಎಸ್ಆರ್ಟಿಸಿ ನಿಗಮ ನಿರ್ದೇಶಕ ಪಿ.ರುದ್ರೇಶ್, ಆಹಾರ ನಿಗಮದ ಸದಸ್ಯ ಜಯರಾಮ್, ಮುಖಂಡ ಎನ್.ಜೆ.ನಾಗರಾಜ್, ಕೆ.ವಿ.ಅಣ್ಣಪ್ಪ ಇದ್ದರು.