More

    ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ರು ಮುಖ್ಯಮಂತ್ರಿ ಯಡಿಯೂರಪ್ಪ!

    ಬೆಂಗಳೂರು: 2021ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತೀರ್ಮಾನ ತಡೆ ಹಿಡಿದಿದ್ದ ಆರ್ಥಿಕ ಇಲಾಖೆ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಿಂಪಡೆದಿದ್ದಾರೆ. ಶುಕ್ರವಾರ ಕಡತ ಪರಿಶೀಲಿಸಿದ ಸಿಎಂ, ಸರ್ಕಾರಿ ನೌಕರರ ಸಂಘದ ಕೋರಿಕೆಯನ್ನು ಮಾನ್ಯ ಮಾಡಿ ಈ ಹಿಂದಿನ ಆದೇಶ ಹಿಂಪಡೆಯಲು ನಿರ್ಧರಿಸಿದರು.

    ಕರೊನಾ ಕಾರಣದಿಂದ ಆರ್ಥಿಕ ಮಿತವ್ಯಯ ಹೇರಿದ್ದ ಸರ್ಕಾರ, ಸರ್ಕಾರಿ ನೌಕರರ ಹದಿನೈದು ದಿನಗಳ ಗಳಿಕೆ ರಜೆಯನ್ನು ನಗದೀಕರಿಸುವ ಅವಕಾಶ ತಡೆಹಿಡಿದಿತ್ತು. ಅದನ್ನು 2021ನೇ ಸಾಲಿಗೂ ವಿಸ್ತರಿಸಿತ್ತು. ಆದರೆ, ಸರ್ಕಾರಿ ನೌಕರರ ಸಂಘ ಈ ತೀರ್ಮಾನ ರದ್ದು ಮಾಡುವಂತೆ ಒತ್ತಡ ತಂದಿತ್ತು.

    ಮುಖ್ಯಮಂತ್ರಿಯವರ ಈ ತೀರ್ಮಾನದಿಂದ ಸರ್ಕಾರಿ ನೌಕರರಿಗೆ ವಾರ್ಷಿಕ ಒಟ್ಟಾರೆ ಏಳುನೂರು ಕೋಟಿ ರೂ.ವರೆಗೆ ಸಂದಾಯವಾಗಲಿದೆ. ಮುಖ್ಯಮಂತ್ರಿಯವರ ನಿರ್ಧಾರಕ್ಕೆ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅಭಿನಂದನೆ ಸಲ್ಲಿಸಿದ್ದಾರೆ.

    ಬ್ಯಾಂಕ್​ ಲಾಕರ್​ನಲ್ಲೂ ಹಣ ಸೇಫ್​ ಅಲ್ಲ!; ಇಲ್ಲಿಟ್ಟ ಹಣ ಏನಾಯ್ತು ನೋಡಿ…

    ಬಿಎಸ್​ಎನ್​ಎಲ್​ ಇಷ್ಟೊಂದು ಬರ್ಬಾದ್ ಆಗಿದ್ಯಾ? ಬರೀ 3 ಸಾವಿರ ರೂ. ಕೊಡಲು ಫಂಡ್ ಇಲ್ವಂತೆ!

    ಕಾಲೇಜ್ ಗ್ರೂಪ್‌ನಲ್ಲಿ ಸಿಕ್ಕ ಹುಡುಗಿಯರ ನಂಬರ್‌ಗೆ ವಿದ್ಯಾರ್ಥಿಗಳ ವೈಯಕ್ತಿಕ ಮೆಸೇಜ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts