More

    ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ

    ಬೆಂಗಳೂರು: ದೇಶಕ್ಕೆ ಹೋಲಿಸಿದರೆ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಉಳಿಸುವಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ. ಜೈವಿಕ ಸಂಪತ್ತನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 2017-18 ಹಾಗೂ 19ನೇ ಸಾಲಿನಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಮಾಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿ ಮಾತನಾಡಿದರು. ಅಧಿಕಾರಿಗಳು ಮತ್ತು ಸಿಬ್ಬಂದಿ ಇನ್ನಷ್ಟು ದಕ್ಷತೆ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಲು ಈ ಪ್ರಶಸ್ತಿಗಳು ಪ್ರೇರಣೆ ಆಗಲಿ ಎಂದರು.

    ಅರಣ್ಯ ಸಚಿವ ಆನಂದ್​ಸಿಂಗ್ ಮಾತನಾಡಿ, ನಮ್ಮ ಅರಣ್ಯ ಇಲಾಖೆ ದೇಶಕ್ಕೆ ಮಾದರಿಯಾಗಿದೆ. ಮುಂಚೂಣಿ ಅಧಿಕಾರಿಗಳು, ಸಿಬ್ಬಂದಿ ಶ್ರಮ ಇದಕ್ಕೆ ಕಾರಣ. ಲಾಕ್​ಡೌನ್ ಸಂದರ್ಭ ಕಾಡು ಉತ್ತಮವಾಗಿ ವೃದ್ಧಿಸಿದೆ ಎಂದರು. ಅರಣ್ಯ ಮತ್ತು ವನ್ಯಜೀವಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅನಂತ ಕುಮಾರ್ ಹೆಗಡೆ ಆಶಿಸರ, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ದುಬೆ, ವಿಧಾನ ಪರಿಷತ್ ಸದಸ್ಯ ರಮೇಶ್​ಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts