ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಜೆಡಿಯು-ಬಿಜೆಪಿ ಮೈತ್ರಿ ಹೆಚ್ಚು ದಿನ ಉಳಿಯಲ್ಲ: ಪ್ರಶಾಂತ್ ಕಿಶೋರ್
ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ರಾಹುಲ್ ಗಾಂಧಿ ಡ್ಯೂಪ್ ಆಗಿದ್ದಾರೆ. ಶೀಘ್ರದಲ್ಲೇ ಅವರ ವಿವರಗಳನ್ನು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ. ಸೋನಿತ್ಪುರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ನ್ಯಾಯ್ ಯಾತ್ರೆ ಸಂದರ್ಭದಲ್ಲಿ ಬಸ್ ಮೇಲಿಂದ ಜನರತ್ತ ಕೈ ಬೀಸುವ ವ್ಯಕ್ತಿ ರಾಹುಲ್ ಗಾಂಧಿ ಅಲ್ಲ. ರಾಹುಲ್ ಗಾಂಧಿ ಅವರಂತೆ ಕಾಣುವ ವ್ಯಕ್ತಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರವಾಸದಲ್ಲಿದ್ದಾರೆ. ರಾಹುಲ್ ಡ್ಯೂಪ್ನ ವಿವರಗಳೊಂದಿಗೆ ರಾಹುಲ್ ಗಾಂಧಿ ಅವರ ಹೆಸರನ್ನು ಬಹಿರಂಗಪಡಿಸುತ್ತೇನೆ. ಈ ವಿಚಾರಗಳನ್ನು ಬಹಿರಂಗಪಡಿಸಲು ಕಾಲಾವಕಾಶ ತೆಗೆದುಕೊಳ್ಳುತ್ತದೆ. ಅತೀ ಶೀಘ್ರದಲ್ಲಿ ಮಾಹಿತಿ ಬಹಿರಂಗಪಡಿಸುತ್ತೇನೆ ಎಂದರು.
ಟೀವಾಲಾ ಯಾತ್ರೆ ಅಂಗವಾಗಿ ಗುವಾಹಟಿ ಗಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯ ಪೊಲೀಸರ ನಡುವೆ ವಾಗ್ವಾದ ನಡೆದಿರುವುದು ಗೊತ್ತೇ ಇದೆ. ಇದರೊಂದಿಗೆ ರಾಹುಲ್ ಹಾಗೂ ಇತರರ ವಿರುದ್ಧ ಕೂಡ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಸಭೆ ಚುನಾವಣೆ ಮುಗಿದ ನಂತರ ಬಂಧನವಾಗಲಿದೆ ಎಂದು ಸಿಎಂ ಹಿಮಂತ ಹೇಳಿದರು.
ಜನವರಿ 14 ರಂದು ಮಣಿಪುರದ ತೌಬಲ್ ಜಿಲ್ಲೆಯಿಂದ ಆರಂಭವಾದ ಭಾರತ್ ಜೋಡೋ ನ್ಯಾಯ್ ಯಾತ್ರೆಯು 110 ಜಿಲ್ಲೆಗಳು ಮತ್ತು 100 ಲೋಕಸಭಾ ಕ್ಷೇತ್ರಗಳಲ್ಲಿ 67 ದಿನಗಳ ಕಾಲ ಮುಂದುವರಿಯಲಿದೆ. ಪ್ರಸ್ತುತ ಪಶ್ಚಿಮ ಬಂಗಾಳದಲ್ಲಿ ಯಾತ್ರೆ ನಡೆಯುತ್ತಿದೆ.