More

    ಚಾಮರಾಜನಗರದ ಘಟನೆ ಬೇರೆಲ್ಲೂ ಮರುಕಳಿಸದಂತೆ ಆಕ್ಸಿಜನ್ ಪೂರೈಕೆಗೆ ಕ್ರಮ

    ಬೆಂಗಳೂರು : ಚಾಮರಾಜನಗರ ಜಿಲ್ಲೆಯಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವಪ್ಪಿರುವ ದುರ್ಘಟನೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಆಕ್ಸಿಜನ್ ಉತ್ಪಾದನಾ ಸಂಸ್ಥೆಗಳು ಕೂಡ ಭಾಗಿಯಾಗಿರುವ ಈ ಸಭೆಯಲ್ಲಿ ಆಕ್ಸಿಜನ್ ತಯಾರಿಕೆ ಮತ್ತು ಆಸ್ಪತ್ರೆಗಳಿಗೆ ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ.

    ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಇಲ್ಲದಂತೆ ಮಾಡಲು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿರುವ ಸಿಎಂ, ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಘಟನೆ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಚಾಮರಾಜನಗರದಲ್ಲಿ ಸತ್ತದ್ದು 24 ಅಲ್ಲ, 34 ಮಂದಿ! ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿದ್ದಾರೆ…

    ಜಿಲ್ಲಾ ಆಸ್ಪತ್ರೆಗಳ ಸ್ಥಿತಿ ಗತಿ ಬಗ್ಗೆ ವರದಿ ಸಂಗ್ರಹ ಮಾಡುವಂತೆ, ಔಷಧಿ ಕೊರತೆಯೂ ಎದುರಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಗೃಹಸಚಿವ ಬಸವರಾಜ್ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

    ಅಮ್ಮನನ್ನು ಉಳಿಸಲು ಬಾಯಿಂದ ಉಸಿರು ತುಂಬಿದಳು ! ಮನ ಕಲಕುತ್ತೆ ಈ ಘಟನೆ

    ’70 ಟನ್ ಆಕ್ಸಿಜನ್ ಬೇಡಿಕೆಗೆ 20 ಟನ್ ಪೂರೈಕೆ; ಸೋಂಕಿನಿಂದಾದ ಸಾವಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ’ ಎಂದ ಕಾಂಗ್ರೆಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts