ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿಕೇಂದ್ರ ವಿಧಾನಸೌಧದ ಪಕ್ಕದಲ್ಲೇ ಇರುವ ವಿಕಾಸಸೌಧಕ್ಕೂ ಇತ್ತೀಚೆಗೆ ಕರೊನಾ ಕಾಲಿಟ್ಟು ತಲ್ಲಣ ಮೂಡಿಸಿತ್ತು. ಈಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೂ ಮಹಾಮಾರಿ ಕೋವಿಡ್19 ಸೋಂಕಿನ ಭೀತಿ ಆವರಿಸಿದೆ.
ಸಿಎಂ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಮಹಿಳಾ ಸಿಬ್ಬಂದಿಯ ಪತಿಗೆ ಕರೊನಾ ಸೋಂಕು ಪಾಸಿಟಿವ್ ಬಂದಿದೆ. ಹಾಗಾಗಿ ಯಾರೊಬ್ಬರಿಗೂ ಕೃಷ್ಣಾದೊಳಗೆ ಬರಲು ಅವಕಾಶ ಇಲ್ಲ. ಮುಖ್ಯಮಂತ್ರಿಯ ಎಲ್ಲ ಕಾರ್ಯಕ್ರಮಗಳೂ ವಿಧಾನಸೌಧಕ್ಕೆ ಶಿಪ್ಟ್ ಆಗಿದೆ. ಇದನ್ನೂ ಓದಿರಿ ಸಚಿವ ಸುರೇಶ್ ಕುಮಾರ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು!
ಸುಮಾರು ದಿನಗಳಿಂದ ಕೃಷ್ಣಾದಲ್ಲಿ ಮಹಿಳಾ ಪೊಲೀಸ್ ಪೇದೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣಾ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದು ಯಾರೊಬ್ಬರಿಗೂ ಕಚೇರಿ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಇದನ್ನೂ ಓದಿರಿ ವಿಕಾಸಸೌಧಕ್ಕೂ ಕಾಲಿಟ್ಟಿತು ಕರೊನಾ!