ತೆಲಂಗಾಣ: ಹೊಸ ಸಚಿವಾಲಯದ ಆವರಣದಲ್ಲಿ ನಿರ್ಮಿಸಲಾದ ದೇವಾಲಯ, ಮಸೀದಿ ಮತ್ತು ಚರ್ಚ್ ಅನ್ನು ಶುಕ್ರವಾರ (ಆಗಸ್ಟ್ 25) ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರೊಂದಿಗೆ ಆಗಮಿಸಿ, ಉದ್ಘಾಟಿಸಿದರು.
ಇದನ್ನೂ ಓದಿ: ಧಾರ್ಮಿಕ ಕಾರ್ಯ ಎಲ್ಲರನ್ನೂ ಒಗ್ಗೂಡಿಸುವ ಮಹಾನ್ ಅಸ್ತ್ರ
ನೂತನ ಸಚಿವಾಲಯದ ಸುತ್ತಮುತ್ತ ನಿರ್ಮಾಣ ಮಾಡಲಾಗಿರುವ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಅನ್ನು ಸಿಎಂ ಕೆಸಿಆರ್, ಪ್ರಾರ್ಥನೆ ಸಲ್ಲಿಸುವ ಮೂರು ಸ್ಥಳಗಳಿಗೆ ಪ್ರತ್ಯೇಕವಾಗಿ ಭೇಟಿ ನೀಡಿ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವ ಮುಖೇನ ಉದ್ಘಾಟನೆ ಮಾಡಿದರು. ಈ ವೇಳೆ ಹಲವು ಸಚಿವರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎಐಎಂಐಎಂ ಅಧ್ಯಕ್ಷ, ಹೈದರಾಬಾದ್ ಲೋಕಸಭಾ ಸದಸ್ಯ ಅಸಾದುದ್ದೀನ್ ಓವೈಸಿ ಮತ್ತು ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಓವೈಸಿ ಮಸೀದಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಚಂದ್ರಗುತ್ತಿ ಶ್ರೀ ರೇಣುಕಾಂಬ ದೇಗುಲದಲ್ಲಿ ಮುತ್ತೈದೆಯರಿಗೆ ಉಡಿ ತುಂಬಿ ವರ ಮಹಾಲಕ್ಷ್ಮೀ ಹಬ್ಬ ಆಚರಣೆ
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ಸಹೋದರತ್ವವನ್ನು ಕಾಪಾಡುವ ಸರ್ಕಾರದ ಪ್ರಯತ್ನಗಳು ಮುಂದುವರಿಯಲಿವೆ. ತೆಲಂಗಾಣ ಸೆಕ್ರೆಟರಿಯೇಟ್ ಆವರಣದಲ್ಲಿ ದೇವಾಲಯ, ಚರ್ಚ್ ಮತ್ತು ಮಸೀದಿಯನ್ನು ನಿರ್ಮಿಸಲಾಗಿದೆ. ಇದು ಇಡೀ ದೇಶಕ್ಕೆ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆಯಾಗಿದೆ” ಎಂದು ಹೇಳಿದರು,(ಏಜೆನ್ಸೀಸ್).